Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕ ಡಾ.ಎಚ್.ಜಿ ಶ್ರೀಧರ ಅವರಿಗೆ ಚಡಗ ಕಾದಂಬರಿ ಪ್ರಶಸ್ತಿ |

Share

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಮುಂಡಿಗೆಹಳ್ಳ ಅವರ ‘ಪ್ರಸ್ಥಾನ’ ಎನ್ನುವ ಕಾದಂಬರಿಗೆ ಈ ಬಾರಿಯ” ಚಡಗ ಕಾದಂಬರಿ ಪ್ರಶಸ್ತಿ ” ಲಭಿಸಿದೆ.

ಕೋಟೇಶ್ವರದ ಎನ್.ಆರ್.ಎ.ಎಂ ಎಚ್ ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗ ಇವರ ನೆನಪಿನಲ್ಲಿ ನೀಡಲಾಗುವ ಹದಿಮೂರನೆಯ ವರ್ಷದ ‘ಚಡಗ ಕಾದಂಬರಿಪ್ರಶಸ್ತಿ’ಗೆ ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಇವರ “ಪ್ರಸ್ಥಾನ” ಕಾದಂಬರಿಯು ಆಯ್ಕೆಯಾಗಿದೆ.ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಹತ್ತು ಸಾವಿರ ನಗದು ಬಹುಮಾನವನ್ನು ಪ್ರಶಸ್ತಿಯು ಒಳಗೊಂಡಿರುತ್ತದೆ.
ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು ಸಾಹಿತ್ಯ ಕ್ಷೇತ್ರದಲ್ಲಿಅಪಾರ ಸೇವೆಯನ್ನುಗೈದಿದ್ದಾರೆ. ಹಲವಾರು ನಾಟಕ,ವಿಮರ್ಶೆ,ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ ‘ಮಲ್ಲೇಪುರಂ ಪ್ರಶಸ್ತಿ’, ‘ಸಹೃದಯ ಪ್ರಾಧ್ಯಾಪಕ ಪ್ರಶಸ್ತಿಯೂ ಲಭಿಸಿದೆ. ಈ ಸಾಲಿನ ಹೆಸರಾಂತ ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

1 minute ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

5 minutes ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

10 hours ago

ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ

ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…

12 hours ago

ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ

ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…

24 hours ago

ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್

ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…

1 day ago