ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಮುಂಡಿಗೆಹಳ್ಳ ಅವರ ‘ಪ್ರಸ್ಥಾನ’ ಎನ್ನುವ ಕಾದಂಬರಿಗೆ ಈ ಬಾರಿಯ” ಚಡಗ ಕಾದಂಬರಿ ಪ್ರಶಸ್ತಿ ” ಲಭಿಸಿದೆ.
ಕೋಟೇಶ್ವರದ ಎನ್.ಆರ್.ಎ.ಎಂ ಎಚ್ ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗ ಇವರ ನೆನಪಿನಲ್ಲಿ ನೀಡಲಾಗುವ ಹದಿಮೂರನೆಯ ವರ್ಷದ ‘ಚಡಗ ಕಾದಂಬರಿಪ್ರಶಸ್ತಿ’ಗೆ ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಇವರ “ಪ್ರಸ್ಥಾನ” ಕಾದಂಬರಿಯು ಆಯ್ಕೆಯಾಗಿದೆ.ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಹತ್ತು ಸಾವಿರ ನಗದು ಬಹುಮಾನವನ್ನು ಪ್ರಶಸ್ತಿಯು ಒಳಗೊಂಡಿರುತ್ತದೆ. ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು ಸಾಹಿತ್ಯ ಕ್ಷೇತ್ರದಲ್ಲಿಅಪಾರ ಸೇವೆಯನ್ನುಗೈದಿದ್ದಾರೆ. ಹಲವಾರು ನಾಟಕ,ವಿಮರ್ಶೆ,ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ ‘ಮಲ್ಲೇಪುರಂ ಪ್ರಶಸ್ತಿ’, ‘ಸಹೃದಯ ಪ್ರಾಧ್ಯಾಪಕ ಪ್ರಶಸ್ತಿಯೂ ಲಭಿಸಿದೆ. ಈ ಸಾಲಿನ ಹೆಸರಾಂತ ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…