ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಮುಂಡಿಗೆಹಳ್ಳ ಅವರ ‘ಪ್ರಸ್ಥಾನ’ ಎನ್ನುವ ಕಾದಂಬರಿಗೆ ಈ ಬಾರಿಯ” ಚಡಗ ಕಾದಂಬರಿ ಪ್ರಶಸ್ತಿ ” ಲಭಿಸಿದೆ.
ಕೋಟೇಶ್ವರದ ಎನ್.ಆರ್.ಎ.ಎಂ ಎಚ್ ಪ್ರಕಾಶನ ಮತ್ತು ಸ್ಥಿತಿಗತಿ ತ್ರೈಮಾಸಿಕ ಪತ್ರಿಕೆಯ ಆಶ್ರಯದಲ್ಲಿ ಕನ್ನಡದ ಹೆಸರಾಂತ ಕಾದಂಬರಿಕಾರ, ಸಂಘಟಕ ಪಾಂಡೇಶ್ವರ ಸೂರ್ಯನಾರಾಯಣ ಚಡಗ ಇವರ ನೆನಪಿನಲ್ಲಿ ನೀಡಲಾಗುವ ಹದಿಮೂರನೆಯ ವರ್ಷದ ‘ಚಡಗ ಕಾದಂಬರಿಪ್ರಶಸ್ತಿ’ಗೆ ಪ್ರಸ್ತುತ ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಇವರ “ಪ್ರಸ್ಥಾನ” ಕಾದಂಬರಿಯು ಆಯ್ಕೆಯಾಗಿದೆ.ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಹತ್ತು ಸಾವಿರ ನಗದು ಬಹುಮಾನವನ್ನು ಪ್ರಶಸ್ತಿಯು ಒಳಗೊಂಡಿರುತ್ತದೆ. ಡಾ.ಎಚ್.ಜಿ.ಶ್ರೀಧರ ಮುಂಡಿಗೆಹಳ್ಳ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು ಮೂವತ್ತು ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು ಸಾಹಿತ್ಯ ಕ್ಷೇತ್ರದಲ್ಲಿಅಪಾರ ಸೇವೆಯನ್ನುಗೈದಿದ್ದಾರೆ. ಹಲವಾರು ನಾಟಕ,ವಿಮರ್ಶೆ,ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ ‘ಮಲ್ಲೇಪುರಂ ಪ್ರಶಸ್ತಿ’, ‘ಸಹೃದಯ ಪ್ರಾಧ್ಯಾಪಕ ಪ್ರಶಸ್ತಿಯೂ ಲಭಿಸಿದೆ. ಈ ಸಾಲಿನ ಹೆಸರಾಂತ ಚಡಗ ಕಾದಂಬರಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…