Advertisement
MIRROR FOCUS

ಚೈತ್ರಾ ಕುಂದಾಪುರ ವಂಚನೆ ಪ್ರಕರಣ | ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ. 19ಕ್ಕೆ ಮುಂದೂಡಿಕೆ |

Share

ಚೈತ್ರಾ ಕುಂದಾಪುರ ಗ್ಯಾಂಗ್​ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ 3ನೇ ಆರೋಪಿ ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್​ ಮುಂದೂಡಿದೆ.

ಅಭಿನವ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಮ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ​ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಸೆ.19ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಇನ್ನು ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಗೋವಿಂದರಾಜನಗರದ ಶ್ರೀಮದ್ ವಿಭೂತಿಪುರ ಒಡೆತನದ ನಿವಾಸದಲ್ಲಿ ವಾಸವಿದ್ದ ಅಭಿನವ ಹಾಲಶ್ರೀ ಇದೇ ಮನೆಯಲ್ಲಿ ಒಂದೂವರೆ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ಸದ್ಯ 3-4 ತಿಂಗಳ ಹಿಂದೆ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ. ಇಲ್ಲಿ ಕೂಡ ಸ್ಥಳ ಮಹಜರು ನಡೆಸಲಾಗಿದೆ. ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಆಂಧ್ರಪ್ರದೇಶದಲ್ಲಿ ಕಾರು ಚಾಲಕ ಪತ್ತೆಯಾಗಿದ್ದು, ಆತನ ವಿಚಾರಣೆ ನಡೆಸಿದರೆ ಶ್ರೀಗಳ ಸುಳಿವು ಪತ್ತೆಯಾಗುವ ಸಾಧ್ಯತೆಯಿದೆ.

ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು: MLA ಟಿಕೆಟ್ ಕೊಡಿಸುವುದಾಗಿ ವಂಚಿಸಿ, ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು ನೀಡಿದ್ದಾರೆ. ಉದ್ಯಮಿ ಗೋವಿಂದಬಾಬು ಪೂಜಾರಿ, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಉಡುಪಿ ಜಿಲ್ಲೆ ಬೈಂದೂರಿನ ಹರ್ಷಾನಾಯ್ಕ್ ಹಳ್ಳಿಹೊಳೆ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ. 11ರಂದು ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್​ಸಿಆರ್ ದಾಖಲಿಸಿದ್ದರು.

ಸ್ನೇಹಿತ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ, ಚಿನ್ನ ಇಟ್ಟಿದ್ದ ಚೈತ್ರಾ: ಉದ್ಯಮಿಗೆ 5 ಕೋಟಿ ವಂಚಿಸಿರುವ ಚೈತ್ರಾ ಕುಂದಾಪುರ ತನ್ನ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ, ಚಿನ್ನ ಇಟ್ಟಿದ್ದಾರೆ. ಉಡುಪಿ ತಾಲೂಕಿನ ಉಪ್ಪೂರಿನಲ್ಲಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಾಕರ್​ನಲ್ಲಿ ನಗನಾಣ್ಯ ಸೇರಿದಂತೆ 1.08 ಕೋಟಿ ಮೌಲ್ಯದ ಆಸ್ತಿ ಪತ್ರ, 65 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 40 ಲಕ್ಷ ರೂ. ಬ್ಯಾಂಕ್​ ಲಾಕರ್​ನಲ್ಲಿ ಪತ್ತೆ ಆಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

24 minutes ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

30 minutes ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

12 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

12 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

16 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago