Advertisement
MIRROR FOCUS

ಚೈತ್ರಾ ಕುಂದಾಪುರ ವಂಚನೆ ಪ್ರಕರಣ | ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಸೆ. 19ಕ್ಕೆ ಮುಂದೂಡಿಕೆ |

Share

ಚೈತ್ರಾ ಕುಂದಾಪುರ ಗ್ಯಾಂಗ್​ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ 3ನೇ ಆರೋಪಿ ಅಭಿನವ ಹಾಲಶ್ರೀ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಬೆಂಗಳೂರಿನ ಸಿಸಿಹೆಚ್ 57 ಕೋರ್ಟ್​ ಮುಂದೂಡಿದೆ.

ಅಭಿನವ ಹಾಲಶ್ರೀ ಪರ ವಕೀಲ ಅರುಣ್ ಶ್ಯಾಮ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ​ ಅರ್ಜಿ ಸಲ್ಲಿಸಿದ್ದರು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ಕುಂದಾಪುರ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ಸೆ.19ಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಇನ್ನು ಹಾಲಶ್ರೀಗೆ ನಿರೀಕ್ಷಣಾ ಜಾಮೀನು ನೀಡದಂತೆ ಉದ್ಯಮಿ ಗೋವಿಂದಬಾಬು ಪೂಜಾರಿ ಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಗೋವಿಂದರಾಜನಗರದ ಶ್ರೀಮದ್ ವಿಭೂತಿಪುರ ಒಡೆತನದ ನಿವಾಸದಲ್ಲಿ ವಾಸವಿದ್ದ ಅಭಿನವ ಹಾಲಶ್ರೀ ಇದೇ ಮನೆಯಲ್ಲಿ ಒಂದೂವರೆ ಕೋಟಿ ಹಣ ಪಡೆದಿದ್ದರು ಎನ್ನಲಾಗಿದೆ. ಸದ್ಯ 3-4 ತಿಂಗಳ ಹಿಂದೆ ಮನೆ ಖಾಲಿ ಮಾಡಿ ನಾಪತ್ತೆಯಾಗಿದ್ದಾರೆ. ಇಲ್ಲಿ ಕೂಡ ಸ್ಥಳ ಮಹಜರು ನಡೆಸಲಾಗಿದೆ. ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ಆಂಧ್ರಪ್ರದೇಶದಲ್ಲಿ ಕಾರು ಚಾಲಕ ಪತ್ತೆಯಾಗಿದ್ದು, ಆತನ ವಿಚಾರಣೆ ನಡೆಸಿದರೆ ಶ್ರೀಗಳ ಸುಳಿವು ಪತ್ತೆಯಾಗುವ ಸಾಧ್ಯತೆಯಿದೆ.

ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು: MLA ಟಿಕೆಟ್ ಕೊಡಿಸುವುದಾಗಿ ವಂಚಿಸಿ, ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗಿತ್ತಿದೆ ಎಂದು ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಅಭಿನವ ಹಾಲಶ್ರೀ ದೂರು ನೀಡಿದ್ದಾರೆ. ಉದ್ಯಮಿ ಗೋವಿಂದಬಾಬು ಪೂಜಾರಿ, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಉಡುಪಿ ಜಿಲ್ಲೆ ಬೈಂದೂರಿನ ಹರ್ಷಾನಾಯ್ಕ್ ಹಳ್ಳಿಹೊಳೆ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ. 11ರಂದು ದೂರು ನೀಡಿದ್ದರು. ಅಭಿನವ ಹಾಲಶ್ರೀ ದೂರಿನ ಬಗ್ಗೆ ಪೊಲೀಸರು ಎನ್​ಸಿಆರ್ ದಾಖಲಿಸಿದ್ದರು.

ಸ್ನೇಹಿತ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ, ಚಿನ್ನ ಇಟ್ಟಿದ್ದ ಚೈತ್ರಾ: ಉದ್ಯಮಿಗೆ 5 ಕೋಟಿ ವಂಚಿಸಿರುವ ಚೈತ್ರಾ ಕುಂದಾಪುರ ತನ್ನ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ, ಚಿನ್ನ ಇಟ್ಟಿದ್ದಾರೆ. ಉಡುಪಿ ತಾಲೂಕಿನ ಉಪ್ಪೂರಿನಲ್ಲಿರುವ ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಾಕರ್​ನಲ್ಲಿ ನಗನಾಣ್ಯ ಸೇರಿದಂತೆ 1.08 ಕೋಟಿ ಮೌಲ್ಯದ ಆಸ್ತಿ ಪತ್ರ, 65 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 40 ಲಕ್ಷ ರೂ. ಬ್ಯಾಂಕ್​ ಲಾಕರ್​ನಲ್ಲಿ ಪತ್ತೆ ಆಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

5 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

6 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

13 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

14 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

23 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

24 hours ago