ಇದೊಂದು ಷಡ್ಯಂತ್ರ | ದೊಡ್ಡವರ ಹೆಸರು ಬಹಿರಂಗವಾಗಲಿದೆ ಎಂದ ಚೈತ್ರ ಕುಂದಾಪುರ |

September 14, 2023
11:22 AM

ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್​ ಕೊಡಿಸುತ್ತೇನೆಂದು ಚೈತ್ರಾ ಕುಂದಾಪುರ  ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರ ಕುಂದಾಪುರ  ಸ್ವಾಮೀಜಿ ಬಂಧನವಾಗಲಿ ಆಗ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ ಎಂಬ ಅಂಶವನ್ನು ಬಹಿರಂಗಪಡಿಸಿದ್ದಾರೆ.

ಪ್ರಕರಣದ ಬಗ್ಗೆ ಖಚಿತ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಸಿಬಿ ಪೊಲೀಸರು ಚೈತ್ರ ಕುಂದಾಪುರ ಸಹಿತ ಎಲ್ಲರನ್ನೂ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಸಿಸಿಬಿ ಕಚೇರಿ ಮುಂದೆ ಪೊಲೀಸ್​ ವಾಹನದಿಂದ ಕೆಳಗಡೆ ಇಳಿಯುತ್ತಿದ್ದಂತೆ ಮಾಧ್ಯಮಗಳ ಕ್ಯಾಮೆರಾ ಮುಂದೆ ಮಾತನಾಡಿದ ಚೈತ್ರಾ ಕುಂದಾಪುರ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್​ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಹೊಸಪೇಟೆ ಜಿಲ್ಲೆಯ ಹಿರೇ ಹಡಗಲಿಯ ಹಾಲುಸ್ವಾಮಿ ಮಠದ ಅಭಿನವ ಶ್ರೀ ಹಾಲುಶ್ರೀ ಸ್ವಾಮೀಜಿ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಚೈತ್ರಾ ಕುಂದಾಪುರ ಅರೆಸ್ಟ್ ಆಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror