ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುತ್ತೇನೆಂದು ಚೈತ್ರಾ ಕುಂದಾಪುರ ಬಹುಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರ ಕುಂದಾಪುರ ಸ್ವಾಮೀಜಿ ಬಂಧನವಾಗಲಿ ಆಗ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ ಎಂಬ ಅಂಶವನ್ನು ಬಹಿರಂಗಪಡಿಸಿದ್ದಾರೆ.
ಪ್ರಕರಣದ ಬಗ್ಗೆ ಖಚಿತ ಮಾಹಿತಿ ಗೊತ್ತಾಗುತ್ತಿದ್ದಂತೆಯೇ ಸಿಸಿಬಿ ಪೊಲೀಸರು ಚೈತ್ರ ಕುಂದಾಪುರ ಸಹಿತ ಎಲ್ಲರನ್ನೂ ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಸಿಸಿಬಿ ಕಚೇರಿ ಮುಂದೆ ಪೊಲೀಸ್ ವಾಹನದಿಂದ ಕೆಳಗಡೆ ಇಳಿಯುತ್ತಿದ್ದಂತೆ ಮಾಧ್ಯಮಗಳ ಕ್ಯಾಮೆರಾ ಮುಂದೆ ಮಾತನಾಡಿದ ಚೈತ್ರಾ ಕುಂದಾಪುರ, ಸ್ವಾಮೀಜಿ ಬಂಧನವಾಗಲಿ ಆಗ ಎಲ್ಲ ಸತ್ಯ ಹೊರಗಡೆ ಬರುತ್ತದೆ. ಇದರಲ್ಲಿ ದೊಡ್ಡ ದೊಡ್ಡವರ ಹೆಸರು ಕೂಡ ಬಹಿರಂಗವಾಗುತ್ತದೆ. ಇಂದಿರಾ ಕ್ಯಾಂಟೀನ್ ಬಿಲ್ಗಾಗಿ ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎಂದು ಹೇಳಿದ್ದಾರೆ.
ಹೊಸಪೇಟೆ ಜಿಲ್ಲೆಯ ಹಿರೇ ಹಡಗಲಿಯ ಹಾಲುಸ್ವಾಮಿ ಮಠದ ಅಭಿನವ ಶ್ರೀ ಹಾಲುಶ್ರೀ ಸ್ವಾಮೀಜಿ ಕೂಡ ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ. ಚೈತ್ರಾ ಕುಂದಾಪುರ ಅರೆಸ್ಟ್ ಆಗುತ್ತಿದ್ದಂತೆಯೇ ಸ್ವಾಮೀಜಿ ನಾಪತ್ತೆಯಾಗಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…