ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು ಹಿಂಪಡೆಯಲಿದ್ದಾರೆ ಎಂಬ ವಿಷಯದ ಕುರಿತು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಮೈಸೂರಿನಲ್ಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀನು ಒಂದು ವೇಳೆ ರಾಜಮನೆತನಕ್ಕೆ ಸೇರಿದ್ದರೂ ರೈತರಿಗೆ ಯಾವುದೇ ತೊಂದರೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಚಾಮರಾಜನಗರದಲ್ಲಿರುವ ತಮ್ಮ ಜಮೀನು ಸಂಬಂಧ, 1950ನೇ ಇಸವಿಯ ಆಧಾರದ ಮೇಲೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇವೆ. ಆದರೆ, ಆ ಜಾಗವನ್ನು ಕಂದಾಯ ಗ್ರಾಮ ಮಾಡುವ ಕುರಿತು ಜಿಲ್ಲಾಡಳಿತದಿಂದ ತಮಗೆ ಯಾವುದೇ ರೀತಿಯ ಮಾಹಿತಿ ಬಂದಿಲ್ಲ. ಹಾಗಾಗಿ ಯಾವುದೇ ಸಮಸ್ಯೆ ಇದ್ದಲ್ಲಿ ಆ ಭಾಗದ ರೈತರು ನೇರವಾಗಿ ತಮ್ಮನ್ನು ಸಂಪರ್ಕಿಸಬಹುದು ಎಂದು ಹೇಳಿದರು. ಆ ಭಾಗದ ಜಮೀನನ್ನು ರಾಜ್ಯ ಸರ್ಕಾರ ರಾಜವಂಶಸ್ಥರಿಗೆ ನೀಡಿದರೂ ತಾವು ಅಲ್ಲಿನ ಜನರಿಗೆ ತೊಂದರೆ ಕೊಡುವುದಿಲ್ಲ. ಬದಲಾಗಿ ಯಥಾಸ್ಥಿತಿ ಕಾಯ್ದುಕೊಳ್ಳಲಿದ್ದೇವೆ. ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ. ಅಂದಿನ ರಾಜರು ನೀಡಿರುವ ದಾನ ಪತ್ರದ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ. ಈ ಸಂಬಂಧ ಅಗತ್ಯ ವಿಷಯ ಸಂಗ್ರಹಿಸಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…