Advertisement
MIRROR FOCUS

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

Share

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು ಹಿಂಪಡೆಯಲಿದ್ದಾರೆ ಎಂಬ ವಿಷಯದ ಕುರಿತು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಮೈಸೂರಿನಲ್ಲಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜಮೀನು ಒಂದು ವೇಳೆ ರಾಜಮನೆತನಕ್ಕೆ ಸೇರಿದ್ದರೂ ರೈತರಿಗೆ ಯಾವುದೇ ತೊಂದರೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಚಾಮರಾಜನಗರದಲ್ಲಿರುವ ತಮ್ಮ ಜಮೀನು ಸಂಬಂಧ, 1950ನೇ ಇಸವಿಯ ಆಧಾರದ ಮೇಲೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇವೆ. ಆದರೆ, ಆ ಜಾಗವನ್ನು ಕಂದಾಯ ಗ್ರಾಮ ಮಾಡುವ ಕುರಿತು ಜಿಲ್ಲಾಡಳಿತದಿಂದ ತಮಗೆ ಯಾವುದೇ ರೀತಿಯ ಮಾಹಿತಿ ಬಂದಿಲ್ಲ. ಹಾಗಾಗಿ ಯಾವುದೇ ಸಮಸ್ಯೆ ಇದ್ದಲ್ಲಿ ಆ ಭಾಗದ ರೈತರು ನೇರವಾಗಿ ತಮ್ಮನ್ನು ಸಂಪರ್ಕಿಸಬಹುದು ಎಂದು ಹೇಳಿದರು. ಆ ಭಾಗದ ಜಮೀನನ್ನು ರಾಜ್ಯ ಸರ್ಕಾರ ರಾಜವಂಶಸ್ಥರಿಗೆ ನೀಡಿದರೂ ತಾವು ಅಲ್ಲಿನ ಜನರಿಗೆ ತೊಂದರೆ ಕೊಡುವುದಿಲ್ಲ. ಬದಲಾಗಿ ಯಥಾಸ್ಥಿತಿ ಕಾಯ್ದುಕೊಳ್ಳಲಿದ್ದೇವೆ. ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ. ಅಂದಿನ ರಾಜರು ನೀಡಿರುವ ದಾನ ಪತ್ರದ  ಕುರಿತು ತಮಗೆ ಯಾವುದೇ  ಮಾಹಿತಿ ಇಲ್ಲ. ಈ ಸಂಬಂಧ ಅಗತ್ಯ ವಿಷಯ ಸಂಗ್ರಹಿಸಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

6 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

7 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

17 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago