Advertisement
MIRROR FOCUS

ಚಾಮರಾಜನಗರ ಜಿಲ್ಲೆ ಸಿದ್ದಾಪುರ ಜಮೀನು ವಿವಾದ | ರೈತರು ಆತಂಕಪಡುವ ಅಗತ್ಯವಿಲ್ಲ

Share

ಚಾಮರಾಜನಗರ ಜಿಲ್ಲೆಯ ಸಿದ್ದಾಪುರ ಗ್ರಾಮದ ಸಾವಿರಾರು ಎಕರೆ ಜಮೀನು ರಾಜವಂಶಸ್ಥರಿಗೆ ಸೇರಿದ್ದು, ಅದನ್ನು ಹಿಂಪಡೆಯಲಿದ್ದಾರೆ ಎಂಬ ವಿಷಯದ ಕುರಿತು ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಮೈಸೂರಿನಲ್ಲಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜಮೀನು ಒಂದು ವೇಳೆ ರಾಜಮನೆತನಕ್ಕೆ ಸೇರಿದ್ದರೂ ರೈತರಿಗೆ ಯಾವುದೇ ತೊಂದರೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಚಾಮರಾಜನಗರದಲ್ಲಿರುವ ತಮ್ಮ ಜಮೀನು ಸಂಬಂಧ, 1950ನೇ ಇಸವಿಯ ಆಧಾರದ ಮೇಲೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದೇವೆ. ಆದರೆ, ಆ ಜಾಗವನ್ನು ಕಂದಾಯ ಗ್ರಾಮ ಮಾಡುವ ಕುರಿತು ಜಿಲ್ಲಾಡಳಿತದಿಂದ ತಮಗೆ ಯಾವುದೇ ರೀತಿಯ ಮಾಹಿತಿ ಬಂದಿಲ್ಲ. ಹಾಗಾಗಿ ಯಾವುದೇ ಸಮಸ್ಯೆ ಇದ್ದಲ್ಲಿ ಆ ಭಾಗದ ರೈತರು ನೇರವಾಗಿ ತಮ್ಮನ್ನು ಸಂಪರ್ಕಿಸಬಹುದು ಎಂದು ಹೇಳಿದರು. ಆ ಭಾಗದ ಜಮೀನನ್ನು ರಾಜ್ಯ ಸರ್ಕಾರ ರಾಜವಂಶಸ್ಥರಿಗೆ ನೀಡಿದರೂ ತಾವು ಅಲ್ಲಿನ ಜನರಿಗೆ ತೊಂದರೆ ಕೊಡುವುದಿಲ್ಲ. ಬದಲಾಗಿ ಯಥಾಸ್ಥಿತಿ ಕಾಯ್ದುಕೊಳ್ಳಲಿದ್ದೇವೆ. ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸುವ ಕೆಲಸ ಮಾಡುವುದಿಲ್ಲ. ಅಂದಿನ ರಾಜರು ನೀಡಿರುವ ದಾನ ಪತ್ರದ  ಕುರಿತು ತಮಗೆ ಯಾವುದೇ  ಮಾಹಿತಿ ಇಲ್ಲ. ಈ ಸಂಬಂಧ ಅಗತ್ಯ ವಿಷಯ ಸಂಗ್ರಹಿಸಿ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

4 hours ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

5 hours ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

14 hours ago

ಒಂದು ದಿನದ ತೀವ್ರ ಬಿಸಿಲು 3,400 ಹೆಚ್ಚುವರಿ ಸಾವುಗಳಿಗೆ ಕಾರಣ…? ಭಾರತದ ಬಗ್ಗೆ ಬೆಚ್ಚಿಬೀಳಿಸುವ ಅಧ್ಯಯನ

ಭಾರತದಲ್ಲಿ ಕೇವಲ ಒಂದು ದಿನದ ತೀವ್ರ ಬಿಸಿಲು ಸುಮಾರು 3,400 ಹೆಚ್ಚುವರಿ ಸಾವುಗಳಿಗೆ…

18 hours ago

ಹವಾಮಾನ ಬಿಕ್ಕಟ್ಟಿನ ನಡುವೆಯೂ ಕೃಷಿ ಉಳಿಸುವ ದಾರಿ ಕಂಡುಕೊಂಡ ದಕ್ಷಿಣ ಏಷ್ಯಾ ದೇಶಗಳು – ಸ್ಥಳೀಯ ಆವಿಷ್ಕಾರಗಳಿಗೆ ಹೆಚ್ಚಿದ ಮಹತ್ವ

ದಕ್ಷಿಣ ಪೂರ್ವ ಏಷ್ಯಾ ರಾಷ್ಟ್ರಗಳು ಹವಾಮಾನ ಬದಲಾವಣೆ ಮತ್ತು ಆಹಾರ ಭದ್ರತೆ ಸವಾಲುಗಳನ್ನು…

18 hours ago

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

1 day ago