Advertisement
ವೆದರ್ ಮಿರರ್

ಹವಾಮಾನ ವರದಿ | 01-12-2025 | ಈಗ ಹಿಂಗಾರು ಮಳೆಯ ಸಾಧ್ಯತೆ – ಎಲ್ಲೆಲ್ಲಿ ಮಳೆಯ ಲಕ್ಷಣ

Share

02.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಳಿಯ ಪ್ರಮಾಣ ಕಡಿಮೆ ಇದ್ದರೆ ತಡ ರಾತ್ರಿ ಕಾಸರಗೋಡು, ಮಂಗಳೂರು, ಸುರತ್ಕಲ್ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 3 ರಿಂದ 5 ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ. ಆದರೆ ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 3 ರಿಂದ 5 ರ ತನಕ ಕೊಡಗು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಉತ್ತರ ಒಳನಾಡು : ರಾಜ್ಯದ ಉತ್ತರ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.  ಈಗಿನಂತೆ ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರುವುದರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಸಂಜೆ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಆದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 2ರಿಂದ 5ರ ತನಕ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ.

ದಿತ್ವಾ ಚಂಡಮಾರುತದ ಪ್ರಭಾವದಿಂದ ಮುಂದಿನ 5 ದಿನಗಳ ತನಕ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ. ಇವತ್ತಿನಿಂದ ದುರ್ಬಲಗೊಳ್ಳುವ ದಿತ್ವಾ ಚಂಡಮಾರುತವು ಡಿಸೆಂಬರ್ 4ರಂದು ತಮಿಳುನಾಡಿನ ಮಹಾಬಲಿಪುರಂ ಕರಾವಳಿಯಲ್ಲಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

10 hours ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

12 hours ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

12 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

1 day ago

ಮಾರ್ಚ್‌ನಲ್ಲಿ‌ ಮಳೆ ಶಾಕ್….! ರೈತರಿಗೆ ನಷ್ಟದ ಭೀತಿ

ದೇಶದ ವಿವಿದೆಡೆ ಮಾರ್ಚ್‌ ತಿಂಗಳಲ್ಲಿ ಉತ್ತಮ ಮಳೆಯಾಗಿದೆ. ವಿಶೇಷವಾಗಿ ರಾಜ್ಕೋಟ್‌ನಲ್ಲಿ ಅಸಾಮಾನ್ಯ ಹವಾಮಾನದಿಂದ…

1 day ago