Advertisement
ವೆದರ್ ಮಿರರ್

ಹವಾಮಾನ ವರದಿ | 01-12-2025 | ಈಗ ಹಿಂಗಾರು ಮಳೆಯ ಸಾಧ್ಯತೆ – ಎಲ್ಲೆಲ್ಲಿ ಮಳೆಯ ಲಕ್ಷಣ

Share

02.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಚಳಿಯ ಪ್ರಮಾಣ ಕಡಿಮೆ ಇದ್ದರೆ ತಡ ರಾತ್ರಿ ಕಾಸರಗೋಡು, ಮಂಗಳೂರು, ಸುರತ್ಕಲ್ ಸುತ್ತಮುತ್ತ ಭಾಗಗಳಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಚಳಿ ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 3 ರಿಂದ 5 ರ ತನಕ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ. ಆದರೆ ಭಾರಿ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಮಲೆನಾಡು : ಕೊಡಗು ಜಿಲ್ಲೆಯ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಒಂದೆರಡು ಕಡೆ ರಾತ್ರಿ ತುಂತುರು ಮಳೆಯ ಮುನ್ಸೂಚನೆ ಇದೆ. ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಈಗಿನಂತೆ ಡಿಸೆಂಬರ್ 3 ರಿಂದ 5 ರ ತನಕ ಕೊಡಗು, ಹಾಸನ ಜಿಲ್ಲೆಗಳ ಅಲ್ಲಲ್ಲಿ ಹಾಗೂ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಉತ್ತರ ಒಳನಾಡು : ರಾಜ್ಯದ ಉತ್ತರ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ.  ಈಗಿನಂತೆ ಉತ್ತರ ಒಳನಾಡಿನಲ್ಲಿ ಚಳಿಯ ಪ್ರಮಾಣ ಹೆಚ್ಚಿರುವುದರಿಂದ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ದಕ್ಷಿಣ ಒಳನಾಡು : ರಾಜ್ಯದ ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ ಜಿಲ್ಲೆಗಳ ತಮಿಳುನಾಡು ಗಡಿ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಮೋಡ ಹಾಗೂ ಸಂಜೆ ಅಲ್ಲಲ್ಲಿ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಆದರೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ರಾತ್ರಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಡಿಸೆಂಬರ್ 2ರಿಂದ 5ರ ತನಕ ಅಲ್ಲಲ್ಲಿ ಹಿಂಗಾರು ಮಳೆಯ ಮುನ್ಸೂಚನೆ ಇದೆ.

ದಿತ್ವಾ ಚಂಡಮಾರುತದ ಪ್ರಭಾವದಿಂದ ಮುಂದಿನ 5 ದಿನಗಳ ತನಕ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಚುರುಕಾಗುವ ಲಕ್ಷಣಗಳಿವೆ. ಇವತ್ತಿನಿಂದ ದುರ್ಬಲಗೊಳ್ಳುವ ದಿತ್ವಾ ಚಂಡಮಾರುತವು ಡಿಸೆಂಬರ್ 4ರಂದು ತಮಿಳುನಾಡಿನ ಮಹಾಬಲಿಪುರಂ ಕರಾವಳಿಯಲ್ಲಿ ಸಂಪೂರ್ಣ ಶಿಥಿಲಗೊಳ್ಳುವ ಲಕ್ಷಣಗಳಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

5 minutes ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

29 minutes ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

2 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

5 hours ago