Advertisement
ವೆದರ್ ಮಿರರ್

ಹವಾಮಾನ ವರದಿ | 03-01-2026 | ಕೆಲವು ಕಡೆ ತುಂತುರು ಮಳೆ ಸಾಧ್ಯತೆ – ಜ.4 ರಿಂದ ಹವಾಮಾನ ಹೇಗೆ…?

Share

04.12.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕರಾವಳಿ : ಕಾಸರಗೋಡು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಕಾರ್ಕಳ, ಹೆಬ್ರಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.  ಉಡುಪಿ ಹಾಗೂ ಮಂಗಳೂರು ಸುತ್ತಮುತ್ತ ಕರಾವಳಿ ಭಾಗಗಳಲ್ಲಿ ಒಂದೆರಡು ಕಡೆ ಮುಂಜಾನೆ ತುಂತುರು ಮಳೆಯ ಸಾಧ್ಯತೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಜನವರಿ 4  ರಿಂದ ಬಿಸಿಲು ಹಾಗೂ ಒಣ ಹವೆ ಮುಂದುವರಿಯಲಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇನ್ನೂ ಒಂದೆರಡು ದಿನಗಳ ಕಾಲ ಆಗಾಗ ಅಲ್ಲಲ್ಲಿ ಹಗುರ ಮೋಡ ಇರಬಹುದು.

ಮಲೆನಾಡು : ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಾಹ್ನ ನಂತರ, ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮೂಡಿಗೆರೆ, ಶೃಂಗೇರಿ, ಆಗುಂಬೆ, ತೀರ್ಥಹಳ್ಳಿ ಸುತ್ತಮುತ್ತ ಒಂದೆರಡು ಕಡೆ ರಾತ್ರಿ, ಮುಂಜಾನೆ ಹನಿ ಮಳೆಯ ಸಾಧ್ಯತೆ ಇದೆ.
ಈಗಿನಂತೆ ಮಲೆನಾಡು ಜಿಲ್ಲೆಗಳಲ್ಲಿ ಜನವರಿ 4 ರಿಂದ ಒಣ ಹವೆ ಮುಂದುವರಿಯಲಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

ಉತ್ತರ ಒಳನಾಡು : ರಾಜ್ಯದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ, ದಾವಣಗೆರೆ, ವಿಜಯನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ. ಈಗಿನಂತೆ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಜನವರಿ 5ರ ತನಕ ಮೋಡದ ವಾತಾವರಣ ಇರಬಹುದು.

ದಕ್ಷಿಣ ಒಳನಾಡು : ರಾಜ್ಯದ ದಕ್ಷಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಜನವರಿ 4 ರಿಂದ ಬಿಸಿಲು ಹಾಗೂ ಒಣ ಹವೆ ಆವರಿಸಲಿದೆ. ಆದರೆ ಜನವರಿ 6 ರಿಂದ ಮತ್ತೆ ಮೋಡದ ವಾತಾವರಣದ ಸಾಧ್ಯತೆಗಳಿವೆ.

ಬಂಗಾಳಕೊಲ್ಲಿಯ ವಾಯುಭಾರ ಕುಸಿತದಂತಹ ತಿರುವಿಕೆ ಅಲ್ಲಿಯೇ ಇನ್ನೆರಡು ದಿನಗಳ ಕಾಲ ಮುಂದುವರಿಯುವ ಲಕ್ಷಣಗಳಿವೆ.  ಇದರ ಜೊತೆಗೆ ಶ್ರೀಲಂಕಾದಲ್ಲಿ ಉಷ್ಣಮಾರುತ ಪರಿಚಲನೆ (ಎಂಟಿ ಸೈಕ್ಲೋನಿಕ್ ಸರ್ಕುಲ್ಯೇಶನ್) ಉಂಟಾಗಿದ್ದು, ಇವತ್ತೇ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇದರ ಪರಿಣಾಮದಿಂದ ಗಾಳಿಯು ಉತ್ತರದಿಂದ ದಕ್ಷಿಣಕ್ಕಿದೆ ಚಲಿಸುವ ಸಾಧ್ಯತೆಗಳಿವೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚಳಿ ಮುಂದುವರಿಯುವ ಸಾಧ್ಯತೆಗಳಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

5 minutes ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

7 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

14 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

23 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

23 hours ago