ಹವಾಮಾನ ವರದಿ | 30-09-2024 | ಗುಡುಗು ಸಹಿತ ಮಳೆ ಸಾಧ್ಯತೆ |

September 30, 2024
1:46 PM
ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈಗಿನ ಮಳೆಯ ವಾತಾವರಣ ಉಂಟಾಗಿದೆ. ಇದರಿಂದ ಹಿಂಗಾರು ಮಾರುತಗಳು ತಡವಾಗುವ ಸಾಧ್ಯತೆಗಳಿವೆ.

01.10.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

Advertisement
Advertisement

ಕರಾವಳಿ : ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಸುಳ್ಯ ತಾಲೂಕು ಕೆಲವು ಭಾಗಗಳಲ್ಲಿ ಮುಂಜಾನೆಯೇ ಮಳೆಯಾದ್ದರಿಂದ ಮತ್ತೆ ಜೋರು ಮಳೆಯ ನಿರೀಕ್ಷೆ ಕಡಿಮೆಯಾಗಿದೆ. ಬೆಳ್ತಂಗಡಿ, ಧರ್ಮಸ್ಥಳ, ಕಾರ್ಕಳ ಸುತ್ತಮುತ್ತ ಹಾಗೂ ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಇನ್ನೆರಡು ದಿನಗಳಲ್ಲಿ ಕರಾವಳಿ ಭಾಗಗಳಲ್ಲಿ ಮಳೆಯ ಪರಿಣಾಮ ಕಡಿಮೆಯಾಗುವ ಲಕ್ಷಣಗಳಿದ್ದು ಮುಂದಿನ 10 ದಿನಗಳವರೆಗೂ ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮಲೆನಾಡು : ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಮುಂದಿನ 10 ದಿನಗಳವರೆಗೂ ಮಲೆನಾಡು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಒಳನಾಡು : ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ವಿಜಯಪುರ ಸುತ್ತಮುತ್ತ ಭಾಗಗಳಲ್ಲಿ ಗುಡುಗಿನೊಂದಿಗೆ ಮಳೆಯ ಮುನ್ಸೂಚನೆ ಇದೆ. ಹಾವೇರಿ ಜಿಲ್ಲೆಯ ಒಂದೆರಡು ಕಡೆ ಸಾಮಾನ್ಯ ಮಳೆಯ ಸಾಧ್ಯತೆ ಇದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲಿ ಇವತ್ತು ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ನಾಳೆಯಿಂದ ಅಂದರೆ ಅಕ್ಟೊಬರ್ 1ರಿಂದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉತ್ತರ ಒಳನಾಡು ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಶ್ರೀಲಂಕಾ ಕರಾವಳಿಯಲ್ಲಿ ಕಾಣಿಸಿಕೊಂಡಿರುವ ತಿರುವಿಕೆ ಪರಿಣಾಮದಿಂದ ಮುಂಗಾರು ಮಾರುತಗಳು ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವುದರಿಂದ ಈಗಿನ ಮಳೆಯ ವಾತಾವರಣ ಉಂಟಾಗಿದೆ. ಇದರಿಂದ ಹಿಂಗಾರು ಮಾರುತಗಳು ತಡವಾಗುವ ಸಾಧ್ಯತೆಗಳಿವೆ.

Advertisement

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಮಳೆ ಸುದ್ದಿ ಏನು ? | ನಾಳೆಯೂ ರೆಡ್‌ ಎಲರ್ಟ್‌ ಎಲ್ಲಿ..?
May 20, 2025
9:44 PM
by: The Rural Mirror ಸುದ್ದಿಜಾಲ
ಸಿಂಧು ಜಲ ಒಪ್ಪಂದ ಅಮಾನತು – ದೇಶದ ಹಲವು ರಾಜ್ಯಗಳ ರೈತರಿಗೆ ಅನುಕೂಲ
May 20, 2025
7:53 PM
by: The Rural Mirror ಸುದ್ದಿಜಾಲ
ಕಾಡಿನಲ್ಲಿ ಶೇಖರಿಸಿದ್ದ ಅಡಿಕೆ ವಶ | 327 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |
May 20, 2025
4:17 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ಭಾರಿ ಮಳೆ | ಬೆಂಗಳೂರು ಮಹಾನಗರ ಪಾಲಿಕೆ, SDRFನಿಂದ ರಕ್ಷಣಾ ಕಾರ್ಯ
May 20, 2025
3:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group