ಸಮಗ್ರ ಕೃಷಿಯಲ್ಲಿ ಯಶಸ್ಸು ಕಂಡ ರೈತ ಚಂದ್ರಣ್ಣ ನಾಗನಹಳ್ಳಿ

December 12, 2025
6:55 AM

ಕೃಷಿಯಲ್ಲಿ ಕಷ್ಟಪಡುವುದಕ್ಕಿಂತ ಹೊರಗೆಲ್ಲೋ ಕೆಲಸಕ್ಕೆ ಹೋಗುವುದೇ ಲೇಸು ಎನ್ನುವ ಜನರ ಮಧ್ಯೆ ಸಮಗ್ರ ಕೃಷಿಯಲ್ಲಿ ಯಶಸ್ಸು ಗಳಿದ ರೈತ ಚಂದ್ರಣ್ಣ ನಾಗೇನಹಳ್ಳಿ ಮಾದರಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಐರಾಣಿ ಗ್ರಾಮದ ರೈತ ಚಂದ್ರಣ್ಣ ನಾಗೇನಹಳ್ಳಿಅವರ ಮಿಶ್ರ ಬೇಸಾಯ ಹಲವು ರೈತರಿಗೆ ಮಾದರಿಯಾಗಿದೆ.

ಚಂದ್ರಣ್ಣ ನಾಗೇನಹಳ್ಳಿ ಅವರು ತಮ್ಮ ಮೂರು ಎಕರೆ ಜಮೀನಿನಲ್ಲಿ ಸಮಗ್ರ ಕೃಷಿ ಹಾಗೂ ನೈಸರ್ಗಿಕ ಬೆಳೆಗಳನ್ನು ಬೆಳೆದು ತನ್ನ ಜಮೀನಿನನ್ನು ಹಸಿರುಮಯವಾಗಿ ಪರಿವರ್ತಿಸಿದ್ದಾರೆ. ಜಮೀನಿನಲ್ಲಿ ಅಡಿಕೆ, ತೆಂಗು, ರಾಮಫಲ, ಕಿತ್ತಳೆ, ನೇರಳೆ, ಲಿಂಬೆ ಬೆಳೆದಿದ್ದಾರೆ. ಸಾರಜನಕ ಸ್ಥರೀಕರಣಕ್ಕಾಗಿ ಗ್ಲೀರಿಸೀಡಿಯಾಗಳನ್ನು ಸುತ್ತಲೂ ಬೆಳೆಸಿದ್ದಾರೆ. ಜತೆಗೆ ಜಾಯಿಕಾಯಿ, ಕರಿಮೆಣಸು, ವೀಳ್ಯದೆಲೆ, ಏಲಕ್ಕಿ, ಬಾಳೆ, ಲವಂಗ, ಹಲಸು, ಪೇರಳೆ, ಮಾವು, ಅಮಟೆಕಾಯಿ, ಸಾಂಬಾರು ಪದಾರ್ಥದಂತಹ ಬೆಳೆಗಳನ್ನು ನೈಸರ್ಗಿಕ ಹಾಗೂ ಸಾವಯವ ಋಷಿಯನ್ನು ಮಾಡಿ ಯಶಸ್ಸು ಕಂಡಿದ್ದಾರೆ.

ಜಮೀನಿನಲಿ ಬೆಳೆದ ಬೆಳೆಗಳಿಗೆ ಯಾವುದೇ ರೀತಿಯ ರಾಸಾಯನಿಕ ಗೊಬ್ಬರ, ಔಷಧಿಗಳನ್ನು ಬಳಕೆ ಮಾಡುವುದಿಲ್ಲ. ಬದಲಾಗಿ ಗಿಡಮರಗಳಿಂದ ಉದುರಿದ ಎಲೆಗಳನ್ನೇ ಗೊಬ್ಬರವಾಗಿ ಬಳಕೆ ಮಾಡಿದ್ದಾರೆ. ಎರೆಹುಳು ತೊಟ್ಟಿ ಮಾಡಿಕೊಂಡು ಗೊಬ್ಬರ ತಯಾರಿ ಮಾಡಿದ್ದಾರೆ. ಇವರು ತನ್ನ ಕೃಷಿಯಿಂದ ಕೇವಲ ಅಡಿಕೆ ಬೆಳೆ ಒಂದರಿಂದಲೇ ವರ್ಷಕ್ಕೆ 10 ರಿಂದ 14 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಉಳಿತಾಯ ಬೆಳೆಗಳಿಂದ ಸಾಕಷ್ಟು ಆದಾಯ ಬರುವುದಾಗಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror