Advertisement
ಸುದ್ದಿಗಳು

ಸಮಗ್ರ ಕೃಷಿಯಲ್ಲಿ ಯಶಸ್ಸು ಕಂಡ ರೈತ ಚಂದ್ರಣ್ಣ ನಾಗನಹಳ್ಳಿ

Share

ಕೃಷಿಯಲ್ಲಿ ಕಷ್ಟಪಡುವುದಕ್ಕಿಂತ ಹೊರಗೆಲ್ಲೋ ಕೆಲಸಕ್ಕೆ ಹೋಗುವುದೇ ಲೇಸು ಎನ್ನುವ ಜನರ ಮಧ್ಯೆ ಸಮಗ್ರ ಕೃಷಿಯಲ್ಲಿ ಯಶಸ್ಸು ಗಳಿದ ರೈತ ಚಂದ್ರಣ್ಣ ನಾಗೇನಹಳ್ಳಿ ಮಾದರಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಐರಾಣಿ ಗ್ರಾಮದ ರೈತ ಚಂದ್ರಣ್ಣ ನಾಗೇನಹಳ್ಳಿಅವರ ಮಿಶ್ರ ಬೇಸಾಯ ಹಲವು ರೈತರಿಗೆ ಮಾದರಿಯಾಗಿದೆ.

ಚಂದ್ರಣ್ಣ ನಾಗೇನಹಳ್ಳಿ ಅವರು ತಮ್ಮ ಮೂರು ಎಕರೆ ಜಮೀನಿನಲ್ಲಿ ಸಮಗ್ರ ಕೃಷಿ ಹಾಗೂ ನೈಸರ್ಗಿಕ ಬೆಳೆಗಳನ್ನು ಬೆಳೆದು ತನ್ನ ಜಮೀನಿನನ್ನು ಹಸಿರುಮಯವಾಗಿ ಪರಿವರ್ತಿಸಿದ್ದಾರೆ. ಜಮೀನಿನಲ್ಲಿ ಅಡಿಕೆ, ತೆಂಗು, ರಾಮಫಲ, ಕಿತ್ತಳೆ, ನೇರಳೆ, ಲಿಂಬೆ ಬೆಳೆದಿದ್ದಾರೆ. ಸಾರಜನಕ ಸ್ಥರೀಕರಣಕ್ಕಾಗಿ ಗ್ಲೀರಿಸೀಡಿಯಾಗಳನ್ನು ಸುತ್ತಲೂ ಬೆಳೆಸಿದ್ದಾರೆ. ಜತೆಗೆ ಜಾಯಿಕಾಯಿ, ಕರಿಮೆಣಸು, ವೀಳ್ಯದೆಲೆ, ಏಲಕ್ಕಿ, ಬಾಳೆ, ಲವಂಗ, ಹಲಸು, ಪೇರಳೆ, ಮಾವು, ಅಮಟೆಕಾಯಿ, ಸಾಂಬಾರು ಪದಾರ್ಥದಂತಹ ಬೆಳೆಗಳನ್ನು ನೈಸರ್ಗಿಕ ಹಾಗೂ ಸಾವಯವ ಋಷಿಯನ್ನು ಮಾಡಿ ಯಶಸ್ಸು ಕಂಡಿದ್ದಾರೆ.

ಜಮೀನಿನಲಿ ಬೆಳೆದ ಬೆಳೆಗಳಿಗೆ ಯಾವುದೇ ರೀತಿಯ ರಾಸಾಯನಿಕ ಗೊಬ್ಬರ, ಔಷಧಿಗಳನ್ನು ಬಳಕೆ ಮಾಡುವುದಿಲ್ಲ. ಬದಲಾಗಿ ಗಿಡಮರಗಳಿಂದ ಉದುರಿದ ಎಲೆಗಳನ್ನೇ ಗೊಬ್ಬರವಾಗಿ ಬಳಕೆ ಮಾಡಿದ್ದಾರೆ. ಎರೆಹುಳು ತೊಟ್ಟಿ ಮಾಡಿಕೊಂಡು ಗೊಬ್ಬರ ತಯಾರಿ ಮಾಡಿದ್ದಾರೆ. ಇವರು ತನ್ನ ಕೃಷಿಯಿಂದ ಕೇವಲ ಅಡಿಕೆ ಬೆಳೆ ಒಂದರಿಂದಲೇ ವರ್ಷಕ್ಕೆ 10 ರಿಂದ 14 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಉಳಿತಾಯ ಬೆಳೆಗಳಿಂದ ಸಾಕಷ್ಟು ಆದಾಯ ಬರುವುದಾಗಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ: ಸೆ.22ರಿಂದ ಇನ್ನಷ್ಟು ಚುರುಕು, 7 ದಿನಗಳ ಎಚ್ಚರಿಕೆ

ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…

3 hours ago

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ

ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…

1 day ago

ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು

ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…

1 day ago

ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ

ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…

1 day ago

ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ

ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…

1 day ago

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

3 days ago