Advertisement
ಸುದ್ದಿಗಳು

ಸಮಗ್ರ ಕೃಷಿಯಲ್ಲಿ ಯಶಸ್ಸು ಕಂಡ ರೈತ ಚಂದ್ರಣ್ಣ ನಾಗನಹಳ್ಳಿ

Share

ಕೃಷಿಯಲ್ಲಿ ಕಷ್ಟಪಡುವುದಕ್ಕಿಂತ ಹೊರಗೆಲ್ಲೋ ಕೆಲಸಕ್ಕೆ ಹೋಗುವುದೇ ಲೇಸು ಎನ್ನುವ ಜನರ ಮಧ್ಯೆ ಸಮಗ್ರ ಕೃಷಿಯಲ್ಲಿ ಯಶಸ್ಸು ಗಳಿದ ರೈತ ಚಂದ್ರಣ್ಣ ನಾಗೇನಹಳ್ಳಿ ಮಾದರಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಐರಾಣಿ ಗ್ರಾಮದ ರೈತ ಚಂದ್ರಣ್ಣ ನಾಗೇನಹಳ್ಳಿಅವರ ಮಿಶ್ರ ಬೇಸಾಯ ಹಲವು ರೈತರಿಗೆ ಮಾದರಿಯಾಗಿದೆ.

ಚಂದ್ರಣ್ಣ ನಾಗೇನಹಳ್ಳಿ ಅವರು ತಮ್ಮ ಮೂರು ಎಕರೆ ಜಮೀನಿನಲ್ಲಿ ಸಮಗ್ರ ಕೃಷಿ ಹಾಗೂ ನೈಸರ್ಗಿಕ ಬೆಳೆಗಳನ್ನು ಬೆಳೆದು ತನ್ನ ಜಮೀನಿನನ್ನು ಹಸಿರುಮಯವಾಗಿ ಪರಿವರ್ತಿಸಿದ್ದಾರೆ. ಜಮೀನಿನಲ್ಲಿ ಅಡಿಕೆ, ತೆಂಗು, ರಾಮಫಲ, ಕಿತ್ತಳೆ, ನೇರಳೆ, ಲಿಂಬೆ ಬೆಳೆದಿದ್ದಾರೆ. ಸಾರಜನಕ ಸ್ಥರೀಕರಣಕ್ಕಾಗಿ ಗ್ಲೀರಿಸೀಡಿಯಾಗಳನ್ನು ಸುತ್ತಲೂ ಬೆಳೆಸಿದ್ದಾರೆ. ಜತೆಗೆ ಜಾಯಿಕಾಯಿ, ಕರಿಮೆಣಸು, ವೀಳ್ಯದೆಲೆ, ಏಲಕ್ಕಿ, ಬಾಳೆ, ಲವಂಗ, ಹಲಸು, ಪೇರಳೆ, ಮಾವು, ಅಮಟೆಕಾಯಿ, ಸಾಂಬಾರು ಪದಾರ್ಥದಂತಹ ಬೆಳೆಗಳನ್ನು ನೈಸರ್ಗಿಕ ಹಾಗೂ ಸಾವಯವ ಋಷಿಯನ್ನು ಮಾಡಿ ಯಶಸ್ಸು ಕಂಡಿದ್ದಾರೆ.

ಜಮೀನಿನಲಿ ಬೆಳೆದ ಬೆಳೆಗಳಿಗೆ ಯಾವುದೇ ರೀತಿಯ ರಾಸಾಯನಿಕ ಗೊಬ್ಬರ, ಔಷಧಿಗಳನ್ನು ಬಳಕೆ ಮಾಡುವುದಿಲ್ಲ. ಬದಲಾಗಿ ಗಿಡಮರಗಳಿಂದ ಉದುರಿದ ಎಲೆಗಳನ್ನೇ ಗೊಬ್ಬರವಾಗಿ ಬಳಕೆ ಮಾಡಿದ್ದಾರೆ. ಎರೆಹುಳು ತೊಟ್ಟಿ ಮಾಡಿಕೊಂಡು ಗೊಬ್ಬರ ತಯಾರಿ ಮಾಡಿದ್ದಾರೆ. ಇವರು ತನ್ನ ಕೃಷಿಯಿಂದ ಕೇವಲ ಅಡಿಕೆ ಬೆಳೆ ಒಂದರಿಂದಲೇ ವರ್ಷಕ್ಕೆ 10 ರಿಂದ 14 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಉಳಿತಾಯ ಬೆಳೆಗಳಿಂದ ಸಾಕಷ್ಟು ಆದಾಯ ಬರುವುದಾಗಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

5 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

12 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago