Advertisement
ಸುದ್ದಿಗಳು

ಸಮಗ್ರ ಕೃಷಿಯಲ್ಲಿ ಯಶಸ್ಸು ಕಂಡ ರೈತ ಚಂದ್ರಣ್ಣ ನಾಗನಹಳ್ಳಿ

Share

ಕೃಷಿಯಲ್ಲಿ ಕಷ್ಟಪಡುವುದಕ್ಕಿಂತ ಹೊರಗೆಲ್ಲೋ ಕೆಲಸಕ್ಕೆ ಹೋಗುವುದೇ ಲೇಸು ಎನ್ನುವ ಜನರ ಮಧ್ಯೆ ಸಮಗ್ರ ಕೃಷಿಯಲ್ಲಿ ಯಶಸ್ಸು ಗಳಿದ ರೈತ ಚಂದ್ರಣ್ಣ ನಾಗೇನಹಳ್ಳಿ ಮಾದರಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಐರಾಣಿ ಗ್ರಾಮದ ರೈತ ಚಂದ್ರಣ್ಣ ನಾಗೇನಹಳ್ಳಿಅವರ ಮಿಶ್ರ ಬೇಸಾಯ ಹಲವು ರೈತರಿಗೆ ಮಾದರಿಯಾಗಿದೆ.

ಚಂದ್ರಣ್ಣ ನಾಗೇನಹಳ್ಳಿ ಅವರು ತಮ್ಮ ಮೂರು ಎಕರೆ ಜಮೀನಿನಲ್ಲಿ ಸಮಗ್ರ ಕೃಷಿ ಹಾಗೂ ನೈಸರ್ಗಿಕ ಬೆಳೆಗಳನ್ನು ಬೆಳೆದು ತನ್ನ ಜಮೀನಿನನ್ನು ಹಸಿರುಮಯವಾಗಿ ಪರಿವರ್ತಿಸಿದ್ದಾರೆ. ಜಮೀನಿನಲ್ಲಿ ಅಡಿಕೆ, ತೆಂಗು, ರಾಮಫಲ, ಕಿತ್ತಳೆ, ನೇರಳೆ, ಲಿಂಬೆ ಬೆಳೆದಿದ್ದಾರೆ. ಸಾರಜನಕ ಸ್ಥರೀಕರಣಕ್ಕಾಗಿ ಗ್ಲೀರಿಸೀಡಿಯಾಗಳನ್ನು ಸುತ್ತಲೂ ಬೆಳೆಸಿದ್ದಾರೆ. ಜತೆಗೆ ಜಾಯಿಕಾಯಿ, ಕರಿಮೆಣಸು, ವೀಳ್ಯದೆಲೆ, ಏಲಕ್ಕಿ, ಬಾಳೆ, ಲವಂಗ, ಹಲಸು, ಪೇರಳೆ, ಮಾವು, ಅಮಟೆಕಾಯಿ, ಸಾಂಬಾರು ಪದಾರ್ಥದಂತಹ ಬೆಳೆಗಳನ್ನು ನೈಸರ್ಗಿಕ ಹಾಗೂ ಸಾವಯವ ಋಷಿಯನ್ನು ಮಾಡಿ ಯಶಸ್ಸು ಕಂಡಿದ್ದಾರೆ.

ಜಮೀನಿನಲಿ ಬೆಳೆದ ಬೆಳೆಗಳಿಗೆ ಯಾವುದೇ ರೀತಿಯ ರಾಸಾಯನಿಕ ಗೊಬ್ಬರ, ಔಷಧಿಗಳನ್ನು ಬಳಕೆ ಮಾಡುವುದಿಲ್ಲ. ಬದಲಾಗಿ ಗಿಡಮರಗಳಿಂದ ಉದುರಿದ ಎಲೆಗಳನ್ನೇ ಗೊಬ್ಬರವಾಗಿ ಬಳಕೆ ಮಾಡಿದ್ದಾರೆ. ಎರೆಹುಳು ತೊಟ್ಟಿ ಮಾಡಿಕೊಂಡು ಗೊಬ್ಬರ ತಯಾರಿ ಮಾಡಿದ್ದಾರೆ. ಇವರು ತನ್ನ ಕೃಷಿಯಿಂದ ಕೇವಲ ಅಡಿಕೆ ಬೆಳೆ ಒಂದರಿಂದಲೇ ವರ್ಷಕ್ಕೆ 10 ರಿಂದ 14 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಉಳಿತಾಯ ಬೆಳೆಗಳಿಂದ ಸಾಕಷ್ಟು ಆದಾಯ ಬರುವುದಾಗಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

14 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

23 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

24 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago