ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.ಇನ್ನು ಸುಮಾರು 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ನೌಕೆ ಇಳಿಯಲಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಶ್ರೀಹರಿಕೋಟಾದ ಕೇಂದ್ರದಲ್ಲಿ ವಿಜ್ಞಾನಿಗಳು, ತಂತ್ರಜ್ಞರ ಹರ್ಷ ಮುಗಿಲು ಮುಟ್ಟಿದೆ.ಆಗಸ್ಟ್ ಮೂರು ಇಲ್ಲವೇ ನಾಲ್ಕನೇ ವಾರ ಚಂದ್ರಯಾನ 3ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ.
ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…