ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.ಇನ್ನು ಸುಮಾರು 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ನೌಕೆ ಇಳಿಯಲಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಶ್ರೀಹರಿಕೋಟಾದ ಕೇಂದ್ರದಲ್ಲಿ ವಿಜ್ಞಾನಿಗಳು, ತಂತ್ರಜ್ಞರ ಹರ್ಷ ಮುಗಿಲು ಮುಟ್ಟಿದೆ.ಆಗಸ್ಟ್ ಮೂರು ಇಲ್ಲವೇ ನಾಲ್ಕನೇ ವಾರ ಚಂದ್ರಯಾನ 3ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ.
ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…