ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.ಇನ್ನು ಸುಮಾರು 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ನೌಕೆ ಇಳಿಯಲಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಶ್ರೀಹರಿಕೋಟಾದ ಕೇಂದ್ರದಲ್ಲಿ ವಿಜ್ಞಾನಿಗಳು, ತಂತ್ರಜ್ಞರ ಹರ್ಷ ಮುಗಿಲು ಮುಟ್ಟಿದೆ.ಆಗಸ್ಟ್ ಮೂರು ಇಲ್ಲವೇ ನಾಲ್ಕನೇ ವಾರ ಚಂದ್ರಯಾನ 3ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ.
ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…
ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…
ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…