ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.ಇನ್ನು ಸುಮಾರು 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ನೌಕೆ ಇಳಿಯಲಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಶ್ರೀಹರಿಕೋಟಾದ ಕೇಂದ್ರದಲ್ಲಿ ವಿಜ್ಞಾನಿಗಳು, ತಂತ್ರಜ್ಞರ ಹರ್ಷ ಮುಗಿಲು ಮುಟ್ಟಿದೆ.ಆಗಸ್ಟ್ ಮೂರು ಇಲ್ಲವೇ ನಾಲ್ಕನೇ ವಾರ ಚಂದ್ರಯಾನ 3ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ.
ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…