ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.ಇನ್ನು ಸುಮಾರು 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ನೌಕೆ ಇಳಿಯಲಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಶ್ರೀಹರಿಕೋಟಾದ ಕೇಂದ್ರದಲ್ಲಿ ವಿಜ್ಞಾನಿಗಳು, ತಂತ್ರಜ್ಞರ ಹರ್ಷ ಮುಗಿಲು ಮುಟ್ಟಿದೆ.ಆಗಸ್ಟ್ ಮೂರು ಇಲ್ಲವೇ ನಾಲ್ಕನೇ ವಾರ ಚಂದ್ರಯಾನ 3ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ.
ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…