ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.ಇನ್ನು ಸುಮಾರು 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ನೌಕೆ ಇಳಿಯಲಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಶ್ರೀಹರಿಕೋಟಾದ ಕೇಂದ್ರದಲ್ಲಿ ವಿಜ್ಞಾನಿಗಳು, ತಂತ್ರಜ್ಞರ ಹರ್ಷ ಮುಗಿಲು ಮುಟ್ಟಿದೆ.ಆಗಸ್ಟ್ ಮೂರು ಇಲ್ಲವೇ ನಾಲ್ಕನೇ ವಾರ ಚಂದ್ರಯಾನ 3ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ.
ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…