ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-3 ಶುಕ್ರವಾರ ಮಧ್ಯಾಹ್ನ 2.35ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ.ಇನ್ನು ಸುಮಾರು 42-45 ದಿನಗಳಲ್ಲಿ ಚಂದ್ರನ ಅಂಗಳದಲ್ಲಿ ನೌಕೆ ಇಳಿಯಲಿದೆ.
ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ಮಧ್ಯಾಹ್ನ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್ಎಲ್ವಿ ಮಾರ್ಕ್ 3 ‘ಬಾಹುಬಲಿ ರಾಕೆಟ್’ ಆಗಸದತ್ತ ಚಿಮ್ಮಿದೆ. ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಚಂದ್ರಯಾನ-3 ನೌಕೆ ನಿಗದಿತ ಕಕ್ಷೆ ಸೇರುವಲ್ಲಿ ಯಶಸ್ವಿಯಾಗಿದೆ. ಇದರ ಬೆನ್ನಲ್ಲೆ ಶ್ರೀಹರಿಕೋಟಾದ ಕೇಂದ್ರದಲ್ಲಿ ವಿಜ್ಞಾನಿಗಳು, ತಂತ್ರಜ್ಞರ ಹರ್ಷ ಮುಗಿಲು ಮುಟ್ಟಿದೆ.ಆಗಸ್ಟ್ ಮೂರು ಇಲ್ಲವೇ ನಾಲ್ಕನೇ ವಾರ ಚಂದ್ರಯಾನ 3ರ ಲ್ಯಾಂಡರ್ ಚಂದ್ರನ ಮೇಲೆ ಇಳಿಯಲಿದೆ.
ಈ ಉಡಾವಣೆಗಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಮತ್ತು ಸಿಬ್ಬಂದಿಗಳು ಮಾತ್ರವಲ್ಲದೇ ಈ ಬಾರಿ ಮುಂಬೈನ ಪೊವಾಯಿ ಮತ್ತು ಕೊಯಮತ್ತೂರಿನಲ್ಲಿರುವ ಲಾರ್ಸೆನ್ ಮತ್ತು ಟೂಬ್ರೊ ಕಾರ್ಖಾನೆಯ ಕೆಲಸಗಾರರೂ ಸಾಥ್ ನೀಡಿದ್ದಾರೆ.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…