MIRROR FOCUS

ತನ್ನ ಕೆಲಸ ಮುಗಿಸಿ ಭೂಮಿಗೆ ಹಿಂತಿರುಗಿದ ಚಂದ್ರಯಾನ-3 ರಾಕೆಟ್ ಅವಶೇಷ | ಅಂತಾರಾಷ್ಟ್ರೀಯ ಕಾನೂನಿನಂತೆ ನಡೆದುಕೊಂಡ ಭಾರತ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಂದು ಚಂದ್ರಯಾನ-೩(Chandrayaan-3) ನೌಕೆಯನ್ನು ಉಡಾವಣೆಗೊಳಿಸಿದ ಸಂಭ್ರಮ ಇಡೀ ಭಾರತೀಯರ(India) ಮನದಲ್ಲಿ ಇಂದು ಕೂಡ ಅಚ್ಚಳಿಯದೇ ಉಳಿದಿದೆ. ಅದು ಯಶಸ್ವಿಯಾಗಿ ತನ್ನ ಕೆಲಸಗಳನ್ನು ಮುಗಿಸಿ ಇದೀಗ ಅವಶೇಷವಾಗಿ(remnant) ಮತ್ತೆ ಭೂಮಿಗೆ(Earth) ಮರಳಿದೆ. ಜುಲೈ 14 ರಂದು ಚಂದ್ರಯಾನ-3  ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ್ದ ಎಲ್‌ವಿಎಂ3 ಎಂ4 ಉಡಾವಣಾ ವಾಹನದ ಅವಶೇಷ ಬುಧವಾರ ಯಾವುದೇ ನಿಯಂತ್ರಣವಿಲ್ಲದೆ ಭೂಮಿಗೆ ಬಿದ್ದಿದೆ ಎಂದು ಇಸ್ರೋ (ISRO) ತಿಳಿಸಿದೆ.

Advertisement

ಈ ರಾಕೆಟ್ (Rocket) ಜುಲೈ 14 ರಂದು ಚಂದ್ರಯಾನ-3 ನೌಕೆಯನ್ನು ಕಕ್ಷೆಗೆ ಸೇರಿಸಿತ್ತು. ಇದಾಗ 124 ದಿನಗಳ ಬಳಿಕ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತವು ಬುಧವಾರ ಭೂಮಿಯನ್ನು ತಲುಪಿದೆ. ಅದು ಭಾರತದ ಭೂಭಾಗದ ಮೇಲೆ ಬೀಳದೆ ಉತ್ತರ ಪೆಸಿಫಿಕ್ ಸಾಗರದಲ್ಲಿ ಬಿದ್ದಿದೆ ಎಂದು ತಿಳಿಸಿದೆ. ಬುಧವಾರ ಮಧ್ಯಾಹ್ನ 2:42ರ ವೇಳೆಗೆ ಅದು ಭೂಮಿಯ ವಾತಾವರಣವನ್ನು ಪುನಃ ಪ್ರವೇಶಿಸಿದೆ. ವಿಶ್ವಸಂಸ್ಥೆ ಮತ್ತು ಐಎಡಿಸಿ ಸೂಚಿಸಿದ ಬಾಹ್ಯಾಕಾಶ ಶಿಲಾಖಂಡಗಳನ್ನು ತಗ್ಗಿಸುವ ಮಾರ್ಗಸೂಚಿಗಳ ಪ್ರಕಾರ ಆಕಸ್ಮಿಕ ಸ್ಫೋಟಗಳ ಅಪಾಯವನ್ನು ಕಡಿಮೆ ಮಾಡಲು ರಾಕೆಟ್‌ನಲ್ಲಿರುವ ಎಲ್ಲಾ ಇಂಧನ ಮತ್ತು ಶಕ್ತಿಯ ಮೂಲಗಳನ್ನು ತೆಗೆದುಹಾಕಲಾಗಿತ್ತು. ಇದು ಬಾಹ್ಯಾಕಾಶದಲ್ಲಿ ಅಂತಾರಾಷ್ಟ್ರೀಯ ಕಾನೂನನ್ನು ಗೌರವಿಸಿ ನಡೆದುಕೊಳ್ಳುವ ಭಾರತದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಇಸ್ರೋ ಹೇಳಿದೆ.

ಜುಲೈ 14 ರಂದು ಶ್ರೀಹರಿಕೋಟಾದಿಂದ ಚಂದ್ರಯಾನ ನೌಕೆಯನ್ನು ಹೊತ್ತ ಎಲ್‌ಎಂವಿ ರಾಕೆಟ್ ಯಶಸ್ವಿಯಾಗಿ ನೌಕೆಯನ್ನು ಕಕ್ಷೆಗೆ ಸೇರಿಸಿತ್ತು. ನಂತರ ನೌಕೆಯನ್ನು ಅಂತಿಮ ಹಂತಕ್ಕೆ ಕೊಂಡುಹೋಗಿದ್ದ ರಾಕೆಟ್‌ನ ಮುಂಭಾಗ ಬಾಹ್ಯಾಕಾಶದಲ್ಲೇ ಉಳಿದುಕೊಂಡಿತ್ತು. ಇದೀಗ ಯಾವುದೇ ನಿಯಂತ್ರಣವಿಲ್ಲದೇ ಇದು ಭೂಮಿಗೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

The rocket launched Chandrayaan-3 into orbit on July 14. After 124 days, the launch vehicle’s cryogenic upper stage reached Earth on Wednesday. It said that it did not land on the Indian mainland but fell in the North Pacific Ocean. It re-entered the Earth’s atmosphere at 2:42 pm on Wednesday.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |

ಭಾರತದ ಮೇಲೆ ನೈಋತ್ಯ ಮಾನ್ಸೂನ್‌ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…

23 hours ago

ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649

24 hours ago

ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ

ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

1 day ago

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 days ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

2 days ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago