Advertisement
MIRROR FOCUS

ತನ್ನ ಕೆಲಸ ಮುಗಿಸಿ ಭೂಮಿಗೆ ಹಿಂತಿರುಗಿದ ಚಂದ್ರಯಾನ-3 ರಾಕೆಟ್ ಅವಶೇಷ | ಅಂತಾರಾಷ್ಟ್ರೀಯ ಕಾನೂನಿನಂತೆ ನಡೆದುಕೊಂಡ ಭಾರತ |

Share

ಅಂದು ಚಂದ್ರಯಾನ-೩(Chandrayaan-3) ನೌಕೆಯನ್ನು ಉಡಾವಣೆಗೊಳಿಸಿದ ಸಂಭ್ರಮ ಇಡೀ ಭಾರತೀಯರ(India) ಮನದಲ್ಲಿ ಇಂದು ಕೂಡ ಅಚ್ಚಳಿಯದೇ ಉಳಿದಿದೆ. ಅದು ಯಶಸ್ವಿಯಾಗಿ ತನ್ನ ಕೆಲಸಗಳನ್ನು ಮುಗಿಸಿ ಇದೀಗ ಅವಶೇಷವಾಗಿ(remnant) ಮತ್ತೆ ಭೂಮಿಗೆ(Earth) ಮರಳಿದೆ. ಜುಲೈ 14 ರಂದು ಚಂದ್ರಯಾನ-3  ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ್ದ ಎಲ್‌ವಿಎಂ3 ಎಂ4 ಉಡಾವಣಾ ವಾಹನದ ಅವಶೇಷ ಬುಧವಾರ ಯಾವುದೇ ನಿಯಂತ್ರಣವಿಲ್ಲದೆ ಭೂಮಿಗೆ ಬಿದ್ದಿದೆ ಎಂದು ಇಸ್ರೋ (ISRO) ತಿಳಿಸಿದೆ.

ಈ ರಾಕೆಟ್ (Rocket) ಜುಲೈ 14 ರಂದು ಚಂದ್ರಯಾನ-3 ನೌಕೆಯನ್ನು ಕಕ್ಷೆಗೆ ಸೇರಿಸಿತ್ತು. ಇದಾಗ 124 ದಿನಗಳ ಬಳಿಕ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತವು ಬುಧವಾರ ಭೂಮಿಯನ್ನು ತಲುಪಿದೆ. ಅದು ಭಾರತದ ಭೂಭಾಗದ ಮೇಲೆ ಬೀಳದೆ ಉತ್ತರ ಪೆಸಿಫಿಕ್ ಸಾಗರದಲ್ಲಿ ಬಿದ್ದಿದೆ ಎಂದು ತಿಳಿಸಿದೆ. ಬುಧವಾರ ಮಧ್ಯಾಹ್ನ 2:42ರ ವೇಳೆಗೆ ಅದು ಭೂಮಿಯ ವಾತಾವರಣವನ್ನು ಪುನಃ ಪ್ರವೇಶಿಸಿದೆ. ವಿಶ್ವಸಂಸ್ಥೆ ಮತ್ತು ಐಎಡಿಸಿ ಸೂಚಿಸಿದ ಬಾಹ್ಯಾಕಾಶ ಶಿಲಾಖಂಡಗಳನ್ನು ತಗ್ಗಿಸುವ ಮಾರ್ಗಸೂಚಿಗಳ ಪ್ರಕಾರ ಆಕಸ್ಮಿಕ ಸ್ಫೋಟಗಳ ಅಪಾಯವನ್ನು ಕಡಿಮೆ ಮಾಡಲು ರಾಕೆಟ್‌ನಲ್ಲಿರುವ ಎಲ್ಲಾ ಇಂಧನ ಮತ್ತು ಶಕ್ತಿಯ ಮೂಲಗಳನ್ನು ತೆಗೆದುಹಾಕಲಾಗಿತ್ತು. ಇದು ಬಾಹ್ಯಾಕಾಶದಲ್ಲಿ ಅಂತಾರಾಷ್ಟ್ರೀಯ ಕಾನೂನನ್ನು ಗೌರವಿಸಿ ನಡೆದುಕೊಳ್ಳುವ ಭಾರತದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಇಸ್ರೋ ಹೇಳಿದೆ.

ಜುಲೈ 14 ರಂದು ಶ್ರೀಹರಿಕೋಟಾದಿಂದ ಚಂದ್ರಯಾನ ನೌಕೆಯನ್ನು ಹೊತ್ತ ಎಲ್‌ಎಂವಿ ರಾಕೆಟ್ ಯಶಸ್ವಿಯಾಗಿ ನೌಕೆಯನ್ನು ಕಕ್ಷೆಗೆ ಸೇರಿಸಿತ್ತು. ನಂತರ ನೌಕೆಯನ್ನು ಅಂತಿಮ ಹಂತಕ್ಕೆ ಕೊಂಡುಹೋಗಿದ್ದ ರಾಕೆಟ್‌ನ ಮುಂಭಾಗ ಬಾಹ್ಯಾಕಾಶದಲ್ಲೇ ಉಳಿದುಕೊಂಡಿತ್ತು. ಇದೀಗ ಯಾವುದೇ ನಿಯಂತ್ರಣವಿಲ್ಲದೇ ಇದು ಭೂಮಿಗೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

The rocket launched Chandrayaan-3 into orbit on July 14. After 124 days, the launch vehicle’s cryogenic upper stage reached Earth on Wednesday. It said that it did not land on the Indian mainland but fell in the North Pacific Ocean. It re-entered the Earth’s atmosphere at 2:42 pm on Wednesday.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

7 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

17 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

18 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

22 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago