Advertisement
MIRROR FOCUS

ತನ್ನ ಕೆಲಸ ಮುಗಿಸಿ ಭೂಮಿಗೆ ಹಿಂತಿರುಗಿದ ಚಂದ್ರಯಾನ-3 ರಾಕೆಟ್ ಅವಶೇಷ | ಅಂತಾರಾಷ್ಟ್ರೀಯ ಕಾನೂನಿನಂತೆ ನಡೆದುಕೊಂಡ ಭಾರತ |

Share

ಅಂದು ಚಂದ್ರಯಾನ-೩(Chandrayaan-3) ನೌಕೆಯನ್ನು ಉಡಾವಣೆಗೊಳಿಸಿದ ಸಂಭ್ರಮ ಇಡೀ ಭಾರತೀಯರ(India) ಮನದಲ್ಲಿ ಇಂದು ಕೂಡ ಅಚ್ಚಳಿಯದೇ ಉಳಿದಿದೆ. ಅದು ಯಶಸ್ವಿಯಾಗಿ ತನ್ನ ಕೆಲಸಗಳನ್ನು ಮುಗಿಸಿ ಇದೀಗ ಅವಶೇಷವಾಗಿ(remnant) ಮತ್ತೆ ಭೂಮಿಗೆ(Earth) ಮರಳಿದೆ. ಜುಲೈ 14 ರಂದು ಚಂದ್ರಯಾನ-3  ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ್ದ ಎಲ್‌ವಿಎಂ3 ಎಂ4 ಉಡಾವಣಾ ವಾಹನದ ಅವಶೇಷ ಬುಧವಾರ ಯಾವುದೇ ನಿಯಂತ್ರಣವಿಲ್ಲದೆ ಭೂಮಿಗೆ ಬಿದ್ದಿದೆ ಎಂದು ಇಸ್ರೋ (ISRO) ತಿಳಿಸಿದೆ.

ಈ ರಾಕೆಟ್ (Rocket) ಜುಲೈ 14 ರಂದು ಚಂದ್ರಯಾನ-3 ನೌಕೆಯನ್ನು ಕಕ್ಷೆಗೆ ಸೇರಿಸಿತ್ತು. ಇದಾಗ 124 ದಿನಗಳ ಬಳಿಕ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತವು ಬುಧವಾರ ಭೂಮಿಯನ್ನು ತಲುಪಿದೆ. ಅದು ಭಾರತದ ಭೂಭಾಗದ ಮೇಲೆ ಬೀಳದೆ ಉತ್ತರ ಪೆಸಿಫಿಕ್ ಸಾಗರದಲ್ಲಿ ಬಿದ್ದಿದೆ ಎಂದು ತಿಳಿಸಿದೆ. ಬುಧವಾರ ಮಧ್ಯಾಹ್ನ 2:42ರ ವೇಳೆಗೆ ಅದು ಭೂಮಿಯ ವಾತಾವರಣವನ್ನು ಪುನಃ ಪ್ರವೇಶಿಸಿದೆ. ವಿಶ್ವಸಂಸ್ಥೆ ಮತ್ತು ಐಎಡಿಸಿ ಸೂಚಿಸಿದ ಬಾಹ್ಯಾಕಾಶ ಶಿಲಾಖಂಡಗಳನ್ನು ತಗ್ಗಿಸುವ ಮಾರ್ಗಸೂಚಿಗಳ ಪ್ರಕಾರ ಆಕಸ್ಮಿಕ ಸ್ಫೋಟಗಳ ಅಪಾಯವನ್ನು ಕಡಿಮೆ ಮಾಡಲು ರಾಕೆಟ್‌ನಲ್ಲಿರುವ ಎಲ್ಲಾ ಇಂಧನ ಮತ್ತು ಶಕ್ತಿಯ ಮೂಲಗಳನ್ನು ತೆಗೆದುಹಾಕಲಾಗಿತ್ತು. ಇದು ಬಾಹ್ಯಾಕಾಶದಲ್ಲಿ ಅಂತಾರಾಷ್ಟ್ರೀಯ ಕಾನೂನನ್ನು ಗೌರವಿಸಿ ನಡೆದುಕೊಳ್ಳುವ ಭಾರತದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಇಸ್ರೋ ಹೇಳಿದೆ.

ಜುಲೈ 14 ರಂದು ಶ್ರೀಹರಿಕೋಟಾದಿಂದ ಚಂದ್ರಯಾನ ನೌಕೆಯನ್ನು ಹೊತ್ತ ಎಲ್‌ಎಂವಿ ರಾಕೆಟ್ ಯಶಸ್ವಿಯಾಗಿ ನೌಕೆಯನ್ನು ಕಕ್ಷೆಗೆ ಸೇರಿಸಿತ್ತು. ನಂತರ ನೌಕೆಯನ್ನು ಅಂತಿಮ ಹಂತಕ್ಕೆ ಕೊಂಡುಹೋಗಿದ್ದ ರಾಕೆಟ್‌ನ ಮುಂಭಾಗ ಬಾಹ್ಯಾಕಾಶದಲ್ಲೇ ಉಳಿದುಕೊಂಡಿತ್ತು. ಇದೀಗ ಯಾವುದೇ ನಿಯಂತ್ರಣವಿಲ್ಲದೇ ಇದು ಭೂಮಿಗೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

The rocket launched Chandrayaan-3 into orbit on July 14. After 124 days, the launch vehicle’s cryogenic upper stage reached Earth on Wednesday. It said that it did not land on the Indian mainland but fell in the North Pacific Ocean. It re-entered the Earth’s atmosphere at 2:42 pm on Wednesday.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

4 days ago