Advertisement
MIRROR FOCUS

ತನ್ನ ಕೆಲಸ ಮುಗಿಸಿ ಭೂಮಿಗೆ ಹಿಂತಿರುಗಿದ ಚಂದ್ರಯಾನ-3 ರಾಕೆಟ್ ಅವಶೇಷ | ಅಂತಾರಾಷ್ಟ್ರೀಯ ಕಾನೂನಿನಂತೆ ನಡೆದುಕೊಂಡ ಭಾರತ |

Share

ಅಂದು ಚಂದ್ರಯಾನ-೩(Chandrayaan-3) ನೌಕೆಯನ್ನು ಉಡಾವಣೆಗೊಳಿಸಿದ ಸಂಭ್ರಮ ಇಡೀ ಭಾರತೀಯರ(India) ಮನದಲ್ಲಿ ಇಂದು ಕೂಡ ಅಚ್ಚಳಿಯದೇ ಉಳಿದಿದೆ. ಅದು ಯಶಸ್ವಿಯಾಗಿ ತನ್ನ ಕೆಲಸಗಳನ್ನು ಮುಗಿಸಿ ಇದೀಗ ಅವಶೇಷವಾಗಿ(remnant) ಮತ್ತೆ ಭೂಮಿಗೆ(Earth) ಮರಳಿದೆ. ಜುಲೈ 14 ರಂದು ಚಂದ್ರಯಾನ-3  ಬಾಹ್ಯಾಕಾಶ ನೌಕೆಯನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ್ದ ಎಲ್‌ವಿಎಂ3 ಎಂ4 ಉಡಾವಣಾ ವಾಹನದ ಅವಶೇಷ ಬುಧವಾರ ಯಾವುದೇ ನಿಯಂತ್ರಣವಿಲ್ಲದೆ ಭೂಮಿಗೆ ಬಿದ್ದಿದೆ ಎಂದು ಇಸ್ರೋ (ISRO) ತಿಳಿಸಿದೆ.

ಈ ರಾಕೆಟ್ (Rocket) ಜುಲೈ 14 ರಂದು ಚಂದ್ರಯಾನ-3 ನೌಕೆಯನ್ನು ಕಕ್ಷೆಗೆ ಸೇರಿಸಿತ್ತು. ಇದಾಗ 124 ದಿನಗಳ ಬಳಿಕ ಉಡಾವಣಾ ವಾಹನದ ಕ್ರಯೋಜೆನಿಕ್ ಮೇಲಿನ ಹಂತವು ಬುಧವಾರ ಭೂಮಿಯನ್ನು ತಲುಪಿದೆ. ಅದು ಭಾರತದ ಭೂಭಾಗದ ಮೇಲೆ ಬೀಳದೆ ಉತ್ತರ ಪೆಸಿಫಿಕ್ ಸಾಗರದಲ್ಲಿ ಬಿದ್ದಿದೆ ಎಂದು ತಿಳಿಸಿದೆ. ಬುಧವಾರ ಮಧ್ಯಾಹ್ನ 2:42ರ ವೇಳೆಗೆ ಅದು ಭೂಮಿಯ ವಾತಾವರಣವನ್ನು ಪುನಃ ಪ್ರವೇಶಿಸಿದೆ. ವಿಶ್ವಸಂಸ್ಥೆ ಮತ್ತು ಐಎಡಿಸಿ ಸೂಚಿಸಿದ ಬಾಹ್ಯಾಕಾಶ ಶಿಲಾಖಂಡಗಳನ್ನು ತಗ್ಗಿಸುವ ಮಾರ್ಗಸೂಚಿಗಳ ಪ್ರಕಾರ ಆಕಸ್ಮಿಕ ಸ್ಫೋಟಗಳ ಅಪಾಯವನ್ನು ಕಡಿಮೆ ಮಾಡಲು ರಾಕೆಟ್‌ನಲ್ಲಿರುವ ಎಲ್ಲಾ ಇಂಧನ ಮತ್ತು ಶಕ್ತಿಯ ಮೂಲಗಳನ್ನು ತೆಗೆದುಹಾಕಲಾಗಿತ್ತು. ಇದು ಬಾಹ್ಯಾಕಾಶದಲ್ಲಿ ಅಂತಾರಾಷ್ಟ್ರೀಯ ಕಾನೂನನ್ನು ಗೌರವಿಸಿ ನಡೆದುಕೊಳ್ಳುವ ಭಾರತದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಇಸ್ರೋ ಹೇಳಿದೆ.

ಜುಲೈ 14 ರಂದು ಶ್ರೀಹರಿಕೋಟಾದಿಂದ ಚಂದ್ರಯಾನ ನೌಕೆಯನ್ನು ಹೊತ್ತ ಎಲ್‌ಎಂವಿ ರಾಕೆಟ್ ಯಶಸ್ವಿಯಾಗಿ ನೌಕೆಯನ್ನು ಕಕ್ಷೆಗೆ ಸೇರಿಸಿತ್ತು. ನಂತರ ನೌಕೆಯನ್ನು ಅಂತಿಮ ಹಂತಕ್ಕೆ ಕೊಂಡುಹೋಗಿದ್ದ ರಾಕೆಟ್‌ನ ಮುಂಭಾಗ ಬಾಹ್ಯಾಕಾಶದಲ್ಲೇ ಉಳಿದುಕೊಂಡಿತ್ತು. ಇದೀಗ ಯಾವುದೇ ನಿಯಂತ್ರಣವಿಲ್ಲದೇ ಇದು ಭೂಮಿಗೆ ಬಿದ್ದಿದೆ.

– ಅಂತರ್ಜಾಲ ಮಾಹಿತಿ

The rocket launched Chandrayaan-3 into orbit on July 14. After 124 days, the launch vehicle’s cryogenic upper stage reached Earth on Wednesday. It said that it did not land on the Indian mainland but fell in the North Pacific Ocean. It re-entered the Earth’s atmosphere at 2:42 pm on Wednesday.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

5 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

11 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

20 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

21 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

22 hours ago