7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು ಹೇಮಕುಂಡ್ ಸಾಹಿಬ್ ಯಾತ್ರೆ 2025 ಕ್ಕೆ ನೋಂದಾಯಿಸಿಕೊಂಡಿದ್ದಾರೆ.ಉತ್ತರಾಖಂಡ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಈ ಮಹತ್ವದ ತೀರ್ಥಯಾತ್ರೆಗೆ ಆಧಾರ್ ಆಧಾರಿತ ನೋಂದಣಿಯನ್ನು ವ್ಯವಸ್ಥೆ ಮಾಡಿದೆ. ನೋಂದಣಿಗಳು ಮಾರ್ಚ್ 20 ರಿಂದ ಪ್ರಾರಂಭವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವಾಲಯವು , ಆಧಾರ್ ಬಳಿಕ ನೋಂದಣಿಯ ಕ್ರಮವು ನಕಲನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ಹೆಚ್ಚಿನ ಯಾತ್ರಿಕರಿಗೆ ಯಾತ್ರೆಯನ್ನು ನಡೆಸುವ ಅವಕಾಶವನ್ನು ನೀಡುತ್ತದೆ ಎಂದು ಹೇಳಿದೆ. ಆಧಾರ್ ಆಧಾರಿತ ಡಿಜಿಟಲ್ ಪರಿಶೀಲನೆಯು ನೋಂದಣಿ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ದಾಖಲೆಗಳನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದೆ.
ಆಧಾರ್ ಆಧಾರಿತ ಆನ್ಲೈನ್ ನೋಂದಣಿಯೊಂದಿಗೆ, ಅಧಿಕಾರಿಗಳು ಯಾತ್ರಿಕರ ಚಲನವಲನಗಳನ್ನು ಮೇಲ್ವಿಚಾರಣೆ ನಡೆಸಲು ಕೂಡಾ ಸಾಧ್ಯವಾಗುತ್ತದೆ. ದೇವಾಲಯಗಳಲ್ಲಿ ಜನದಟ್ಟಣೆಯನ್ನು ತಪ್ಪಿಸಲು, ಹವಾಮಾನ ಸಂಬಂಧಿತ ಮಾಹಿತಿಯನ್ನು ಕೂಡಾ ಸುಧಾರಿಸಬಹುದು, ಮಾಹಿತಿ ನೀಡಲು ಸಾಧ್ಯವಿದೆ. ಆಧಾರ್-ಲಿಂಕ್ಡ್ ನೋಂದಣಿಯು ನೋಂದಾಯಿತ ಯಾತ್ರಿಕರ ನಿಜವಾದ ಸಂಖ್ಯೆಯ ಆಧಾರದ ಮೇಲೆ ವಸತಿ, ಸಾರಿಗೆ, ಆಹಾರ ಮತ್ತು ವೈದ್ಯಕೀಯ ನೆರವಿನ ಉತ್ತಮ ಯೋಜನೆ ಮತ್ತು ನಿರ್ವಹಣೆಗೆ ಸಹಾಯ ಮಾಡುತ್ತದೆ, ಯಾತ್ರಿಕರು ಮತ್ತು ಅಧಿಕಾರಿಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಸುಧಾರಣೆ, ತುರ್ತು ಸಂದರ್ಭಗಳನ್ನು ಉತ್ತಮವಾಗಿ ಪರಿಹರಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಸಚಿವಾಲಯ ಹೇಳಿದೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…