7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು ಹೇಮಕುಂಡ್ ಸಾಹಿಬ್ ಯಾತ್ರೆ 2025 ಕ್ಕೆ ನೋಂದಾಯಿಸಿಕೊಂಡಿದ್ದಾರೆ.ಉತ್ತರಾಖಂಡ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಈ ಮಹತ್ವದ ತೀರ್ಥಯಾತ್ರೆಗೆ ಆಧಾರ್ ಆಧಾರಿತ ನೋಂದಣಿಯನ್ನು ವ್ಯವಸ್ಥೆ ಮಾಡಿದೆ. ನೋಂದಣಿಗಳು ಮಾರ್ಚ್ 20 ರಿಂದ ಪ್ರಾರಂಭವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವಾಲಯವು , ಆಧಾರ್ ಬಳಿಕ ನೋಂದಣಿಯ ಕ್ರಮವು ನಕಲನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ಹೆಚ್ಚಿನ ಯಾತ್ರಿಕರಿಗೆ ಯಾತ್ರೆಯನ್ನು ನಡೆಸುವ ಅವಕಾಶವನ್ನು ನೀಡುತ್ತದೆ ಎಂದು ಹೇಳಿದೆ. ಆಧಾರ್ ಆಧಾರಿತ ಡಿಜಿಟಲ್ ಪರಿಶೀಲನೆಯು ನೋಂದಣಿ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ದಾಖಲೆಗಳನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದೆ.
ಆಧಾರ್ ಆಧಾರಿತ ಆನ್ಲೈನ್ ನೋಂದಣಿಯೊಂದಿಗೆ, ಅಧಿಕಾರಿಗಳು ಯಾತ್ರಿಕರ ಚಲನವಲನಗಳನ್ನು ಮೇಲ್ವಿಚಾರಣೆ ನಡೆಸಲು ಕೂಡಾ ಸಾಧ್ಯವಾಗುತ್ತದೆ. ದೇವಾಲಯಗಳಲ್ಲಿ ಜನದಟ್ಟಣೆಯನ್ನು ತಪ್ಪಿಸಲು, ಹವಾಮಾನ ಸಂಬಂಧಿತ ಮಾಹಿತಿಯನ್ನು ಕೂಡಾ ಸುಧಾರಿಸಬಹುದು, ಮಾಹಿತಿ ನೀಡಲು ಸಾಧ್ಯವಿದೆ. ಆಧಾರ್-ಲಿಂಕ್ಡ್ ನೋಂದಣಿಯು ನೋಂದಾಯಿತ ಯಾತ್ರಿಕರ ನಿಜವಾದ ಸಂಖ್ಯೆಯ ಆಧಾರದ ಮೇಲೆ ವಸತಿ, ಸಾರಿಗೆ, ಆಹಾರ ಮತ್ತು ವೈದ್ಯಕೀಯ ನೆರವಿನ ಉತ್ತಮ ಯೋಜನೆ ಮತ್ತು ನಿರ್ವಹಣೆಗೆ ಸಹಾಯ ಮಾಡುತ್ತದೆ, ಯಾತ್ರಿಕರು ಮತ್ತು ಅಧಿಕಾರಿಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಸುಧಾರಣೆ, ತುರ್ತು ಸಂದರ್ಭಗಳನ್ನು ಉತ್ತಮವಾಗಿ ಪರಿಹರಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಸಚಿವಾಲಯ ಹೇಳಿದೆ.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…