7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು ಹೇಮಕುಂಡ್ ಸಾಹಿಬ್ ಯಾತ್ರೆ 2025 ಕ್ಕೆ ನೋಂದಾಯಿಸಿಕೊಂಡಿದ್ದಾರೆ.ಉತ್ತರಾಖಂಡ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಈ ಮಹತ್ವದ ತೀರ್ಥಯಾತ್ರೆಗೆ ಆಧಾರ್ ಆಧಾರಿತ ನೋಂದಣಿಯನ್ನು ವ್ಯವಸ್ಥೆ ಮಾಡಿದೆ. ನೋಂದಣಿಗಳು ಮಾರ್ಚ್ 20 ರಿಂದ ಪ್ರಾರಂಭವಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವಾಲಯವು , ಆಧಾರ್ ಬಳಿಕ ನೋಂದಣಿಯ ಕ್ರಮವು ನಕಲನ್ನು ತಡೆಯಲು ಸಹಾಯ ಮಾಡುತ್ತದೆ ಮತ್ತು ಹೆಚ್ಚಿನ ಯಾತ್ರಿಕರಿಗೆ ಯಾತ್ರೆಯನ್ನು ನಡೆಸುವ ಅವಕಾಶವನ್ನು ನೀಡುತ್ತದೆ ಎಂದು ಹೇಳಿದೆ. ಆಧಾರ್ ಆಧಾರಿತ ಡಿಜಿಟಲ್ ಪರಿಶೀಲನೆಯು ನೋಂದಣಿ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ದಾಖಲೆಗಳನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದೆ.
ಆಧಾರ್ ಆಧಾರಿತ ಆನ್ಲೈನ್ ನೋಂದಣಿಯೊಂದಿಗೆ, ಅಧಿಕಾರಿಗಳು ಯಾತ್ರಿಕರ ಚಲನವಲನಗಳನ್ನು ಮೇಲ್ವಿಚಾರಣೆ ನಡೆಸಲು ಕೂಡಾ ಸಾಧ್ಯವಾಗುತ್ತದೆ. ದೇವಾಲಯಗಳಲ್ಲಿ ಜನದಟ್ಟಣೆಯನ್ನು ತಪ್ಪಿಸಲು, ಹವಾಮಾನ ಸಂಬಂಧಿತ ಮಾಹಿತಿಯನ್ನು ಕೂಡಾ ಸುಧಾರಿಸಬಹುದು, ಮಾಹಿತಿ ನೀಡಲು ಸಾಧ್ಯವಿದೆ. ಆಧಾರ್-ಲಿಂಕ್ಡ್ ನೋಂದಣಿಯು ನೋಂದಾಯಿತ ಯಾತ್ರಿಕರ ನಿಜವಾದ ಸಂಖ್ಯೆಯ ಆಧಾರದ ಮೇಲೆ ವಸತಿ, ಸಾರಿಗೆ, ಆಹಾರ ಮತ್ತು ವೈದ್ಯಕೀಯ ನೆರವಿನ ಉತ್ತಮ ಯೋಜನೆ ಮತ್ತು ನಿರ್ವಹಣೆಗೆ ಸಹಾಯ ಮಾಡುತ್ತದೆ, ಯಾತ್ರಿಕರು ಮತ್ತು ಅಧಿಕಾರಿಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಸುಧಾರಣೆ, ತುರ್ತು ಸಂದರ್ಭಗಳನ್ನು ಉತ್ತಮವಾಗಿ ಪರಿಹರಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ಸಚಿವಾಲಯ ಹೇಳಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…