Advertisement
ಕಲೆ-ಸಂಸ್ಕೃತಿ

ಪುಣೆಯ ಸಾಫ್ಟ್ ವೇರ್  ಇಂಜಿನಿಯರ್ ವಿಶೇಷ ಸಾಧನೆ | ಚರಕಾದಿಂದ 7,00,000 ಪ್ಲಾಸ್ಟಿಕ್ ಹೊದಿಕೆ, ಬ್ಯಾಗ್ ಹಾಗೂ ಮ್ಯಾಟ್‌ಗಳನ್ನು ತಯಾರಿಸಿದ ಐಟಿ ಇಂಜಿನಿಯರ್ |

Share

ಸ್ವದೇಶಿ ಉಡುಪುಗಳನ್ನು ಉತ್ತೇಜಿಸಲು ನೂಲುವ ಚಕ್ರದ ಬಳಕೆ ಮಾಡಿ ಉದ್ಯಮವನ್ನಾಗಿಸಿದ್ದೂ ಅಲ್ಲದೆ ಸಾಕಷ್ಟು ಜನರು ಇಂತಹ ಬಟ್ಟೆ ತೊಡುವಂತೆ ಮಾಡಿದ್ದಾರೆ ಪುಣೆಯ ಸಾಫ್ಟ್ ವೇರ್  ಇಂಜಿನಿಯರ್. ಈ ವಿಶೇಷ ಕಾರ್ಯ ಗ್ರಾಮೀಣ ಅಭಿವೃದ್ಧಿಗೆ ಮಾದರಿಯೂ ಆಗಿದೆ.

ಮಹಾತ್ಮ ಗಾಂಧೀಜಿಯವರು ವಿದೇಶಿ ನಿರ್ಮಿತ ಉತ್ಪನ್ನಗಳನ್ನು ಬಹಿಷ್ಕರಿಸಲು ಮತ್ತು ಸ್ವದೇಶಿ ಉಡುಪುಗಳನ್ನು ಉತ್ತೇಜಿಸಲು ನೂಲುವ ಚಕ್ರದ ಬಳಕೆಯನ್ನು ಪ್ರಮುಖ ಸಾಧನವಾಗಿ ನಿಯೋಜಿಸಿದರು. ಆದರಂತೆ ಅದೇ ಸಂದೇಶವನ್ನು ಪ್ರಚಾರ ಮಾಡುವ ದೃಷ್ಟಿಯಲ್ಲಿ ಪುಣೆಯ ಸಾಫ್ಟ್ ವೇರ್  ಇಂಜಿನಿಯರ್ ಅಮಿತ್ ದೇಶಪಾಂಡೆ ಚರಕಾವನ್ನು ಬಳಸಿಕೊಂಡು ಉತ್ಪನ್ನಗಳನ್ನು ತಯಾರಿಸಿದ್ದಾರೆ.

ಬೃಹತ್ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯವು ನಗರ ಪ್ರದೇಶಗಳಲ್ಲಿ ಮಾತ್ರ ಉತ್ಪತ್ತಿಯಾಗುತ್ತದೆ. ಅಂತಹ ವಸ್ತುಗಳನ್ನು  ಮರುಬಳಕೆ ಮಾಡಬೇಕಾಗುತ್ತದೆ. ಆದರೆ ಗ್ರಾಮೀಣ ಜನರು ಬದುಕನ್ನು ಏರಿಸಲು ಅಲ್ಲಿನ ಕರಕುಶಲ ವಸ್ತುಗಳಿಗೆ ಮಾರುಕಟ್ಟೆ ಮಾಡಿಕೊಡಬೇಕಿದೆ. ಈ ಕಾರಣದಿಂದ ಗ್ರಾಮೀಣಾಭಿವೃದ್ಧಿಯ ಉದ್ಯಮಗಳು ಅಗತ್ಯವಾಗಿದೆ ಎನ್ನುವತ್ತಾರೆ ಅಮಿತ್.‌  ನಮ್ಮ ಗ್ರಾಮಗಳು ಒಂದು ಕಾಲದಲ್ಲಿ ಕರಕುಶಲ ವಸ್ತುಗಳಿಗೆ ಹೆಸರುವಾಸಿಯಾಗಿತ್ತು ಎನ್ನುತ್ತಾರೆ ಅವರು.

ಅಮಿತ್ ದೇಶಪಾಂಡೆ ಮೊದಲು ಚರಕಾದಿಂದ ಮಾಡಿದ ಉತ್ಪನ್ನಗಳಿಗೆ ಜನರು ಅಷ್ಟಾಗಿ ಗಮನ ಕೊಡಲಿಲ್ಲ. ಅದಕ್ಕಾಗಿ ಅಮಿತ್ ಅವರು ಎಕ್ಸ್ ಪೋಸ್, ವರ್ಕ್ ಶಾಪ್‌ಗಳು, ಪ್ರದರ್ಶನಗಳಲ್ಲಿ ವೀಡಿಯೋವನ್ನು ಪ್ಲೇ ಮಾಡಿದರು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವನ್ನು ಪ್ರಸಾರ ಮಾಡಿದೆ. ಇದು ಹೆಚ್ಚು ಪ್ರಯೋಜನವಾಯಿತು ಎಂದರು.

ಅದಾದ ಬಳಿಕ ಖಾದಿ ವಸ್ತುಗಳು, ಕರಕುಶಲ ಉತ್ಪನ್ನಗಳು ಕೆಲವು ಅಂಗಡಿಗಳ ಕಪಾಟಿನಲ್ಲಿ ಕಂಡುಬಂದವು ಮತ್ತು ಆನ್‌ಲೈನ್‌ನಲ್ಲಿ ಮಾರಾಟ ಮಾಡಲು ವಬ್‌ಸೈಟ್ ಅನ್ನು ಪ್ರಾರಂಭಿಸಿದರು. ಈಗ ಅಮಿತ್‌ ಅವರು ಕಾರ್ಪೊರೇಟ್ ಉಡುಗೊರೆಗಳನ್ನು ಸಹ ಪೊರೈಸುತ್ತಾರೆ. ಕಳೆದ ವರ್ಷದಿಂದ ಅಮಿತಾ ಅವರ ಪತಿ ಅಭಿಷೇಕ್ ಪರಂಜ್ವೆ ಕೂಡಾ ಸೇರಿಕೊಂಡರು. ಕಳೆದ ವರ್ಷ ಕೊರೋನಾ ಸಾಂಕ್ರಾಮಿಕ ರೋಗದ ನಂತರ ತನ್ನ ಆದಾಯವನ್ನು ಹೆಚ್ಚಿತು ಎನ್ನುತ್ತಾರೆ.

ಗ್ರಾಮೀಣ ಭಾಗಗಳಲ್ಲಿ ಇಂತಹ ಉದ್ಯಮಗಳು ಬೆಳೆದರೆ ಮಾತ್ರವೇ ಗ್ರಾಮೀಣಾಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮೀಣ ಜನರ ಆದಾಯ ಹೆಚ್ಚಾಗುವುದು ಅಲ್ಲದೆ ಮಾರುಕಟ್ಟೆ ಕೂಡಾ ಬೆಳೆಯಲು ಸಾಧ್ಯವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

17 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

18 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

20 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

1 day ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

1 day ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

1 day ago