ಮೂಡಿಗೆರೆ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟ್ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದೆ. ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿನ ಕಾಡ್ಗಿಚ್ಚಿಗೆ ಗುಡ್ಡದ ತುದಿಭಾಗ ಭಸ್ಮವಾಗಿದೆ. ಮೂಕ ಪ್ರಾಣಿಗಳು ಬೆಂಕಿಯ ತಾಪಕ್ಕೆ ಬೆಂದು ಹೋಗಿವೆ.
ಚಾರ್ಮಾಡಿ ಘಾಟಿಗೆ ಹೊಂದಿಕೊಂಡಿರುವ ಎತ್ತರ ಪ್ರದೇಶದ ಗುಡ್ಡದಲ್ಲಿ ಹೊತ್ತಿ ಉರಿಯುತ್ತಿದ್ದು ಬೆಂಕಿಯ ಜ್ವಾಲೆ ಎಲ್ಲೆಡೆ ಹರಡುತ್ತಿದೆ. ಕಾಡ್ಗಿಚ್ಚಿನಿಂದ ಉಂಟಾದ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಅರಣ್ಯ ಬೆಂಕಿಗಾಹುತಿಯಾಗಿದೆ.
ಕಳೆದ 3 ದಿನದಿಂದ ಚಾರ್ಮಾಡಿ ಘಾಟ್ ನಿರಂತರವಾಗಿ ಉರಿಯುತ್ತಿದ್ದು, ಅರಣ್ಯಾಧಿಕಾರಿಗಳು ಎಷ್ಟೇ ಯತ್ನ ನಡೆಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರು ಸಾಥ್ ನೀಡಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟವಾಗಿದ್ದು ಕಾಡು ಸೊಪ್ಪನ್ನು ಬಳಸಿಯೇ ಬೆಂಕಿ ನಂದಿಸುತ್ತಿದ್ದಾರೆ.
ನಿನ್ನೆಯಷ್ಟೇ ಬೆಂಕಿ ನಂದಿಸಲು ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್ಗೆ ಬೆಂಕಿ ಹತ್ತಿಕೊಂಡಿದ್ದು, 3 ಬೈಕ್ ಗಳು ಸುಟ್ಟು ಭಸ್ಮವಾಗಿದೆ. ಗಾಳಿಯಲ್ಲಿ ಬಂದ ಕಿಡಿಯಿಂದ ಬೈಕ್ ಗಳಿಗೆ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ನಲ್ಲಿ ಸಂಭವಿಸಿರುವ ಈ ದುರಂತ ಜನರನ್ನು ಬೆಚ್ಚಿ ಬೀಳಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ನೂರಾರು ಪ್ರಾಣಿಪಕ್ಷಿಗಳು ಪ್ರಾಣ ಕಳೆದುಕೊಂಡಿವೆ, ಇನ್ನು ಬೆಂಕಿ ಕೆನ್ನಾಲಿಗೆಯಿಂದ ತಾಪ ಹೆಚ್ಚಾಗಿ ಕಾಳಿಂಗ ಸರ್ಪ ನಾಡಿನತ್ತ ಲಗ್ಗೆ ಇಟ್ಟಿವೆ. ಕಾಡಂಚಿನ ಗ್ರಾಮ ತರುವೆಯಲ್ಲಿ ಬೃಹತ್ ಕಾಳಿಂಗ ಸರ್ಪ ಸೆರೆಯಾಗಿದೆ.
ದೈತ್ಯಾಕಾರದ ಕಾಳಿಂಗನನ್ನ ನೋಡಿ ಗ್ರಾಮಸ್ಥರು ಮತ್ತಷ್ಟು ಭಯಭೀತರಾಗಿದ್ದಾರೆ. ಬೃಹತ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಚಾರ್ಮಾಡಿ ಘಾಟಿಯ ಬೆಂಕಿ ಬೀಳದ ಪ್ರದೇಶಕ್ಕೆ ತಜ್ಞರು ಬಿಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…