Advertisement
ಸುದ್ದಿಗಳು

ಸತತವಾಗಿ 3 ದಿನಗಳಿಂದ ಹೊತ್ತಿ ಉರಿಯುತ್ತಿರುವ ಚಾರ್ಮಾಡಿ ಕಾಡು | ಅಪಾರ ಪ್ರಮಾಣದ ಪ್ರಾಣಿ-ಪಕ್ಷಿ, ಸಸ್ಯಸಂಕುಲ ನಾಶ |

Share

ಮೂಡಿಗೆರೆ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟ್​ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದೆ. ಆಲೇಖಾನ್ ಹೊರಟ್ಟಿ ಗುಡ್ಡದಲ್ಲಿನ ಕಾಡ್ಗಿಚ್ಚಿಗೆ ಗುಡ್ಡದ ತುದಿಭಾಗ ಭಸ್ಮವಾಗಿದೆ. ಮೂಕ ಪ್ರಾಣಿಗಳು ಬೆಂಕಿಯ ತಾಪಕ್ಕೆ ಬೆಂದು ಹೋಗಿವೆ.

Advertisement

ಚಾರ್ಮಾಡಿ ಘಾಟಿಗೆ ಹೊಂದಿಕೊಂಡಿರುವ ಎತ್ತರ ಪ್ರದೇಶದ ಗುಡ್ಡದಲ್ಲಿ ಹೊತ್ತಿ ಉರಿಯುತ್ತಿದ್ದು ಬೆಂಕಿಯ ಜ್ವಾಲೆ ಎಲ್ಲೆಡೆ ಹರಡುತ್ತಿದೆ. ಕಾಡ್ಗಿಚ್ಚಿನಿಂದ ಉಂಟಾದ ಬೆಂಕಿಯಿಂದಾಗಿ ಅಪಾರ ಪ್ರಮಾಣದ ಅರಣ್ಯ ಬೆಂಕಿಗಾಹುತಿಯಾಗಿದೆ.

ಕಳೆದ 3 ದಿನದಿಂದ ಚಾರ್ಮಾಡಿ ಘಾಟ್ ನಿರಂತರವಾಗಿ ಉರಿಯುತ್ತಿದ್ದು, ಅರಣ್ಯಾಧಿಕಾರಿಗಳು ಎಷ್ಟೇ ಯತ್ನ ನಡೆಸಿದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರು ಸಾಥ್ ನೀಡಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟವಾಗಿದ್ದು ಕಾಡು ಸೊಪ್ಪನ್ನು ಬಳಸಿಯೇ ಬೆಂಕಿ ನಂದಿಸುತ್ತಿದ್ದಾರೆ.

ನಿನ್ನೆಯಷ್ಟೇ ಬೆಂಕಿ ನಂದಿಸಲು ತೆರಳಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಬೈಕ್​ಗೆ ಬೆಂಕಿ ಹತ್ತಿಕೊಂಡಿದ್ದು, 3 ಬೈಕ್ ಗಳು ಸುಟ್ಟು ಭಸ್ಮವಾಗಿದೆ. ಗಾಳಿಯಲ್ಲಿ ಬಂದ ಕಿಡಿಯಿಂದ ಬೈಕ್ ಗಳಿಗೆ ಬೆಂಕಿ ಹತ್ತಿಕೊಂಡಿದೆ ಎಂದು ಹೇಳಲಾಗಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್​ನಲ್ಲಿ ಸಂಭವಿಸಿರುವ ಈ ದುರಂತ ಜನರನ್ನು ಬೆಚ್ಚಿ ಬೀಳಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ನೂರಾರು ಪ್ರಾಣಿಪಕ್ಷಿಗಳು ಪ್ರಾಣ ಕಳೆದುಕೊಂಡಿವೆ, ಇನ್ನು ಬೆಂಕಿ ಕೆನ್ನಾಲಿಗೆಯಿಂದ ತಾಪ ಹೆಚ್ಚಾಗಿ ಕಾಳಿಂಗ ಸರ್ಪ ನಾಡಿನತ್ತ ಲಗ್ಗೆ ಇಟ್ಟಿವೆ. ಕಾಡಂಚಿನ ಗ್ರಾಮ ತರುವೆಯಲ್ಲಿ ಬೃಹತ್ ಕಾಳಿಂಗ ಸರ್ಪ ಸೆರೆಯಾಗಿದೆ.

ದೈತ್ಯಾಕಾರದ ಕಾಳಿಂಗನನ್ನ ನೋಡಿ ಗ್ರಾಮಸ್ಥರು ಮತ್ತಷ್ಟು ಭಯಭೀತರಾಗಿದ್ದಾರೆ.  ಬೃಹತ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದು ಚಾರ್ಮಾಡಿ ಘಾಟಿಯ ಬೆಂಕಿ ಬೀಳದ ಪ್ರದೇಶಕ್ಕೆ ತಜ್ಞರು ಬಿಟ್ಟಿದ್ದಾರೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

19 minutes ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

40 minutes ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

47 minutes ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

56 minutes ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago