ರಾಷ್ಟ್ರೀಯ ಹೆದ್ದಾರಿ-73 ಮಂಗಳೂರು-ತುಮಕೂರು ರಸ್ತೆಯ 75 ಕಿಮೀ. (ಚಾರ್ಮಾಡಿ ಗ್ರಾಮ) ದಿಂದ 86.20 ಕಿ.ಮೀ (ದಕ್ಷಿಣ ಕನ್ನಡ ಜಿಲ್ಲಾ ಗಡಿ)ವರೆಗಿನ ಚಾರ್ಮಾಟಿ ಘಾಟ್ ರಸ್ತೆಯಲ್ಲಿ 2021ರ ಡಿ.18 ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ದಿನದ 24 ಗಂಟೆಯೂ ಲಘು ಹಾಗೂ ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ, ಅದೇ ರೀತಿ ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದಾರೆ.
ಲಘು, ಘನ ವಾಹನಗಳು(ಗುಂಪು-ಎ):
ಸಾರ್ವಜನಿಕರು ಸಂಚರಿಸುವ ಕೆ.ಎಸ್.ಆರ್.ಟಿ.ಸಿ ಕೆಂಪು ಬಸ್ಸು, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೋ ಟ್ರಾವೆಲರ್ಸ್, ಆ್ಯಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್.ಸಿ.ವಿ(ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ದಿನದ 24 ಗಂಟೆಯೂ ಸಂಚರಿಸಬಹುದಾಗಿದೆ.
ಘನ ವಾಹನಗಳು(ಗುಂಪು-ಬಿ):
ಬುಲೆಟ್ ಟ್ಯಾಂಕರ್ರ್ಸ್, ಪಿಪ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್ ಚಾಸೀಸ್ ವಾಹನಗಳೂ, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್, ಟ್ರಕ್ ಟ್ರೈಲರ್, ಕೆ.ಎಸ್.ಆರ್.ಟಿ.ಸಿ. ರಾಜಹಂಸ ಮತ್ತು ಎಲ್ಲಾ ಬಗ್ಗೆಯ ಅಧಿಕ ಭಾರದ ಸರಕು ಸಾಗಣೆ ವಾಹನಗಳ ಸಂಚಾರವನ್ನು ದಿನದ 24 ಗಂಟೆಯೂ ನಿರ್ಬಂಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…