Advertisement
ಸುದ್ದಿಗಳು

ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!

Share

ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ , ವಿವಿಧ ವಿಶೇಷಣೆ, ಅಲಂಕಾರಗಳಿಂದ ವಿದ್ವತ್‌ ತೋರ್ಪಡಿಸಿ, ಪರೋಕ್ಷವಾಗಿ ಇನ್ನೊಂದು ಮಠವನ್ನು, ಅಲ್ಲಿನ ಸ್ವಾಮೀಜಿಗಳನ್ನು ವ್ಯಂಗ್ಯವಾಡಿ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದ ಕಲಾವಿದ, ವಿದ್ವಾಂಸರೊಬ್ಬರು ನಂತರ ಅದೇ ಮಠಕ್ಕೆ ತೆರಳಿ ಸ್ವಾಮೀಜಿಗಳಿಗೆ ಅಡ್ಡಬಿದ್ದು, ಮಂತ್ರಾಕ್ಷತೆ ಪಡೆದ ಘಟನೆ ನಡೆದಿದೆ.

ಕಾಸರಗೋಡು ಮೂಲದ ಪ್ರಸಿದ್ಧ ಮಠವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ತಾಳಮದ್ದಲೆ ಸಪ್ತಾಹವೂ ಒಂದು. ಆ ಸಪ್ತಾಹದ ಒಂದು ದಿನ ಇಬ್ಬರು”ವಿದ್ವಾಂಸರು” ಚಾತುರ್ಮಾಸ್ಯ ಹಾಗೂ ಇನ್ನೊಂದು ಮಠವನ್ನು ಪರೋಕ್ಷವಾಗಿ ವ್ಯಂಗ್ಯ ಮಾಡಿದ್ದರು.ತಾಳಮದ್ದಲೆ ಅಂದರೆ ಮಾತಿನ ಮಂಟಪ, ವಿದ್ವತ್‌ ಪ್ರದರ್ಶನ. ಇಲ್ಲಿ ವಿದ್ವತ್‌ ಪ್ರದರ್ಶನ ಸ್ವಲ್ಪ ಹೆಚ್ಚೇ ನಡೆದಿತ್ತು. ಇಲ್ಲಿ ಒಬ್ಬರು ಚಾತುರ್ಮಾಸ್ಯವನ್ನು ವ್ಯಂಗ್ಯ ಮಾಡಿದ್ದರೆ ಇನ್ನೊಬ್ಬರು, ಪಾತ್ರದಲ್ಲಿ ವ್ಯಕ್ತಪಡಿಸಬೇಕಾದ ಅಭಿವ್ಯಕ್ತಿ, ಪಾತ್ರದ ಪರಿಚಯಕ್ಕಿಂತ ಸ್ವಲ್ಪ ಹೆಚ್ಚೇ “ವಿದ್ವತ್”‌ ಪ್ರದರ್ಶನ ಮಾಡಿದರು. ಈ ವಿಡಿಯೋ ವೈರಲ್‌ ಆಗಿತ್ತು. ಮೊದಲೇ ಆ ಮಠದ ಜೊತೆಗೆ ಅಷ್ಟಷ್ಟಕ್ಕೇ ಇದ್ದ ಈ “ವಿದ್ವಾನ್”‌ ಪರೋಕ್ಷವಾಗಿ ಇಲ್ಲೂ ವ್ಯಂಗ್ಯ ಮಾಡಿದ್ದರು.  ಇದು ಭಕ್ತರ ನಡುವೆ ಚರ್ಚೆಗೆ ಕಾರಣವಾಯಿತು. ಕೊನೆಗೆ ವ್ಯಂಗ್ಯವಾಡಿದ ಮಠ ಹಾಗೂ ಸ್ವಾಮೀಜಿ ಅವರಲ್ಲಿಗೆ ತೆರಳಿ ಅಡ್ಡಬಿದ್ದು, ಮಂತ್ರಾಕ್ಷತೆಯನ್ನು ಪಡೆದುಕೊಂಡಿರುವ ಈ ಫೋಟೊ ವೈರಲ್‌ ಆಗಿದೆ. ಆದರೆ ಚಾತುರ್ಮಾಸ್ಯವನ್ನು ವ್ಯಂಗ್ಯ ಮಾಡಿದವರು ಆ ಫೋಟೊದಲ್ಲಿ ಕಾಣಲಿಲ್ಲ..!

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

7 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

7 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

8 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

17 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

17 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

21 hours ago