Advertisement
ಸುದ್ದಿಗಳು

ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!

Share

ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ , ವಿವಿಧ ವಿಶೇಷಣೆ, ಅಲಂಕಾರಗಳಿಂದ ವಿದ್ವತ್‌ ತೋರ್ಪಡಿಸಿ, ಪರೋಕ್ಷವಾಗಿ ಇನ್ನೊಂದು ಮಠವನ್ನು, ಅಲ್ಲಿನ ಸ್ವಾಮೀಜಿಗಳನ್ನು ವ್ಯಂಗ್ಯವಾಡಿ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದ ಕಲಾವಿದ, ವಿದ್ವಾಂಸರೊಬ್ಬರು ನಂತರ ಅದೇ ಮಠಕ್ಕೆ ತೆರಳಿ ಸ್ವಾಮೀಜಿಗಳಿಗೆ ಅಡ್ಡಬಿದ್ದು, ಮಂತ್ರಾಕ್ಷತೆ ಪಡೆದ ಘಟನೆ ನಡೆದಿದೆ.

ಕಾಸರಗೋಡು ಮೂಲದ ಪ್ರಸಿದ್ಧ ಮಠವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ತಾಳಮದ್ದಲೆ ಸಪ್ತಾಹವೂ ಒಂದು. ಆ ಸಪ್ತಾಹದ ಒಂದು ದಿನ ಇಬ್ಬರು”ವಿದ್ವಾಂಸರು” ಚಾತುರ್ಮಾಸ್ಯ ಹಾಗೂ ಇನ್ನೊಂದು ಮಠವನ್ನು ಪರೋಕ್ಷವಾಗಿ ವ್ಯಂಗ್ಯ ಮಾಡಿದ್ದರು.ತಾಳಮದ್ದಲೆ ಅಂದರೆ ಮಾತಿನ ಮಂಟಪ, ವಿದ್ವತ್‌ ಪ್ರದರ್ಶನ. ಇಲ್ಲಿ ವಿದ್ವತ್‌ ಪ್ರದರ್ಶನ ಸ್ವಲ್ಪ ಹೆಚ್ಚೇ ನಡೆದಿತ್ತು. ಇಲ್ಲಿ ಒಬ್ಬರು ಚಾತುರ್ಮಾಸ್ಯವನ್ನು ವ್ಯಂಗ್ಯ ಮಾಡಿದ್ದರೆ ಇನ್ನೊಬ್ಬರು, ಪಾತ್ರದಲ್ಲಿ ವ್ಯಕ್ತಪಡಿಸಬೇಕಾದ ಅಭಿವ್ಯಕ್ತಿ, ಪಾತ್ರದ ಪರಿಚಯಕ್ಕಿಂತ ಸ್ವಲ್ಪ ಹೆಚ್ಚೇ “ವಿದ್ವತ್”‌ ಪ್ರದರ್ಶನ ಮಾಡಿದರು. ಈ ವಿಡಿಯೋ ವೈರಲ್‌ ಆಗಿತ್ತು. ಮೊದಲೇ ಆ ಮಠದ ಜೊತೆಗೆ ಅಷ್ಟಷ್ಟಕ್ಕೇ ಇದ್ದ ಈ “ವಿದ್ವಾನ್”‌ ಪರೋಕ್ಷವಾಗಿ ಇಲ್ಲೂ ವ್ಯಂಗ್ಯ ಮಾಡಿದ್ದರು.  ಇದು ಭಕ್ತರ ನಡುವೆ ಚರ್ಚೆಗೆ ಕಾರಣವಾಯಿತು. ಕೊನೆಗೆ ವ್ಯಂಗ್ಯವಾಡಿದ ಮಠ ಹಾಗೂ ಸ್ವಾಮೀಜಿ ಅವರಲ್ಲಿಗೆ ತೆರಳಿ ಅಡ್ಡಬಿದ್ದು, ಮಂತ್ರಾಕ್ಷತೆಯನ್ನು ಪಡೆದುಕೊಂಡಿರುವ ಈ ಫೋಟೊ ವೈರಲ್‌ ಆಗಿದೆ. ಆದರೆ ಚಾತುರ್ಮಾಸ್ಯವನ್ನು ವ್ಯಂಗ್ಯ ಮಾಡಿದವರು ಆ ಫೋಟೊದಲ್ಲಿ ಕಾಣಲಿಲ್ಲ..!

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

11 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

20 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

1 day ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

2 days ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago