Advertisement
ಸುದ್ದಿಗಳು

ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!

Share

ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ , ವಿವಿಧ ವಿಶೇಷಣೆ, ಅಲಂಕಾರಗಳಿಂದ ವಿದ್ವತ್‌ ತೋರ್ಪಡಿಸಿ, ಪರೋಕ್ಷವಾಗಿ ಇನ್ನೊಂದು ಮಠವನ್ನು, ಅಲ್ಲಿನ ಸ್ವಾಮೀಜಿಗಳನ್ನು ವ್ಯಂಗ್ಯವಾಡಿ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದ ಕಲಾವಿದ, ವಿದ್ವಾಂಸರೊಬ್ಬರು ನಂತರ ಅದೇ ಮಠಕ್ಕೆ ತೆರಳಿ ಸ್ವಾಮೀಜಿಗಳಿಗೆ ಅಡ್ಡಬಿದ್ದು, ಮಂತ್ರಾಕ್ಷತೆ ಪಡೆದ ಘಟನೆ ನಡೆದಿದೆ.

ಕಾಸರಗೋಡು ಮೂಲದ ಪ್ರಸಿದ್ಧ ಮಠವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ತಾಳಮದ್ದಲೆ ಸಪ್ತಾಹವೂ ಒಂದು. ಆ ಸಪ್ತಾಹದ ಒಂದು ದಿನ ಇಬ್ಬರು”ವಿದ್ವಾಂಸರು” ಚಾತುರ್ಮಾಸ್ಯ ಹಾಗೂ ಇನ್ನೊಂದು ಮಠವನ್ನು ಪರೋಕ್ಷವಾಗಿ ವ್ಯಂಗ್ಯ ಮಾಡಿದ್ದರು.ತಾಳಮದ್ದಲೆ ಅಂದರೆ ಮಾತಿನ ಮಂಟಪ, ವಿದ್ವತ್‌ ಪ್ರದರ್ಶನ. ಇಲ್ಲಿ ವಿದ್ವತ್‌ ಪ್ರದರ್ಶನ ಸ್ವಲ್ಪ ಹೆಚ್ಚೇ ನಡೆದಿತ್ತು. ಇಲ್ಲಿ ಒಬ್ಬರು ಚಾತುರ್ಮಾಸ್ಯವನ್ನು ವ್ಯಂಗ್ಯ ಮಾಡಿದ್ದರೆ ಇನ್ನೊಬ್ಬರು, ಪಾತ್ರದಲ್ಲಿ ವ್ಯಕ್ತಪಡಿಸಬೇಕಾದ ಅಭಿವ್ಯಕ್ತಿ, ಪಾತ್ರದ ಪರಿಚಯಕ್ಕಿಂತ ಸ್ವಲ್ಪ ಹೆಚ್ಚೇ “ವಿದ್ವತ್”‌ ಪ್ರದರ್ಶನ ಮಾಡಿದರು. ಈ ವಿಡಿಯೋ ವೈರಲ್‌ ಆಗಿತ್ತು. ಮೊದಲೇ ಆ ಮಠದ ಜೊತೆಗೆ ಅಷ್ಟಷ್ಟಕ್ಕೇ ಇದ್ದ ಈ “ವಿದ್ವಾನ್”‌ ಪರೋಕ್ಷವಾಗಿ ಇಲ್ಲೂ ವ್ಯಂಗ್ಯ ಮಾಡಿದ್ದರು.  ಇದು ಭಕ್ತರ ನಡುವೆ ಚರ್ಚೆಗೆ ಕಾರಣವಾಯಿತು. ಕೊನೆಗೆ ವ್ಯಂಗ್ಯವಾಡಿದ ಮಠ ಹಾಗೂ ಸ್ವಾಮೀಜಿ ಅವರಲ್ಲಿಗೆ ತೆರಳಿ ಅಡ್ಡಬಿದ್ದು, ಮಂತ್ರಾಕ್ಷತೆಯನ್ನು ಪಡೆದುಕೊಂಡಿರುವ ಈ ಫೋಟೊ ವೈರಲ್‌ ಆಗಿದೆ. ಆದರೆ ಚಾತುರ್ಮಾಸ್ಯವನ್ನು ವ್ಯಂಗ್ಯ ಮಾಡಿದವರು ಆ ಫೋಟೊದಲ್ಲಿ ಕಾಣಲಿಲ್ಲ..!

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

46 minutes ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

3 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

3 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

3 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

6 hours ago