Advertisement
ಸುದ್ದಿಗಳು

ತಾಳಮದ್ದಳೆಯಲ್ಲಿ ಪರೋಕ್ಷ ವ್ಯಂಗ್ಯವಾಡಿ, ಈಗ ಅದೇ ಮಠದಲ್ಲಿ ಪ್ರತ್ಯಕ್ಷ…!

Share

ಕಾಸರಗೋಡು ಮೂಲದ ಸ್ವಾಮೀಜಿಯೊಬ್ಬರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಈಚೆಗೆ ನಡೆದ ತಾಳಮದ್ದಳೆ ಸಪ್ತಾಹ ಕಾರ್ಯಕ್ರಮದಲ್ಲಿ , ವಿವಿಧ ವಿಶೇಷಣೆ, ಅಲಂಕಾರಗಳಿಂದ ವಿದ್ವತ್‌ ತೋರ್ಪಡಿಸಿ, ಪರೋಕ್ಷವಾಗಿ ಇನ್ನೊಂದು ಮಠವನ್ನು, ಅಲ್ಲಿನ ಸ್ವಾಮೀಜಿಗಳನ್ನು ವ್ಯಂಗ್ಯವಾಡಿ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದ ಕಲಾವಿದ, ವಿದ್ವಾಂಸರೊಬ್ಬರು ನಂತರ ಅದೇ ಮಠಕ್ಕೆ ತೆರಳಿ ಸ್ವಾಮೀಜಿಗಳಿಗೆ ಅಡ್ಡಬಿದ್ದು, ಮಂತ್ರಾಕ್ಷತೆ ಪಡೆದ ಘಟನೆ ನಡೆದಿದೆ.

ಕಾಸರಗೋಡು ಮೂಲದ ಪ್ರಸಿದ್ಧ ಮಠವೊಂದರಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿತ್ತು. ಅದರಲ್ಲಿ ತಾಳಮದ್ದಲೆ ಸಪ್ತಾಹವೂ ಒಂದು. ಆ ಸಪ್ತಾಹದ ಒಂದು ದಿನ ಇಬ್ಬರು”ವಿದ್ವಾಂಸರು” ಚಾತುರ್ಮಾಸ್ಯ ಹಾಗೂ ಇನ್ನೊಂದು ಮಠವನ್ನು ಪರೋಕ್ಷವಾಗಿ ವ್ಯಂಗ್ಯ ಮಾಡಿದ್ದರು.ತಾಳಮದ್ದಲೆ ಅಂದರೆ ಮಾತಿನ ಮಂಟಪ, ವಿದ್ವತ್‌ ಪ್ರದರ್ಶನ. ಇಲ್ಲಿ ವಿದ್ವತ್‌ ಪ್ರದರ್ಶನ ಸ್ವಲ್ಪ ಹೆಚ್ಚೇ ನಡೆದಿತ್ತು. ಇಲ್ಲಿ ಒಬ್ಬರು ಚಾತುರ್ಮಾಸ್ಯವನ್ನು ವ್ಯಂಗ್ಯ ಮಾಡಿದ್ದರೆ ಇನ್ನೊಬ್ಬರು, ಪಾತ್ರದಲ್ಲಿ ವ್ಯಕ್ತಪಡಿಸಬೇಕಾದ ಅಭಿವ್ಯಕ್ತಿ, ಪಾತ್ರದ ಪರಿಚಯಕ್ಕಿಂತ ಸ್ವಲ್ಪ ಹೆಚ್ಚೇ “ವಿದ್ವತ್”‌ ಪ್ರದರ್ಶನ ಮಾಡಿದರು. ಈ ವಿಡಿಯೋ ವೈರಲ್‌ ಆಗಿತ್ತು. ಮೊದಲೇ ಆ ಮಠದ ಜೊತೆಗೆ ಅಷ್ಟಷ್ಟಕ್ಕೇ ಇದ್ದ ಈ “ವಿದ್ವಾನ್”‌ ಪರೋಕ್ಷವಾಗಿ ಇಲ್ಲೂ ವ್ಯಂಗ್ಯ ಮಾಡಿದ್ದರು.  ಇದು ಭಕ್ತರ ನಡುವೆ ಚರ್ಚೆಗೆ ಕಾರಣವಾಯಿತು. ಕೊನೆಗೆ ವ್ಯಂಗ್ಯವಾಡಿದ ಮಠ ಹಾಗೂ ಸ್ವಾಮೀಜಿ ಅವರಲ್ಲಿಗೆ ತೆರಳಿ ಅಡ್ಡಬಿದ್ದು, ಮಂತ್ರಾಕ್ಷತೆಯನ್ನು ಪಡೆದುಕೊಂಡಿರುವ ಈ ಫೋಟೊ ವೈರಲ್‌ ಆಗಿದೆ. ಆದರೆ ಚಾತುರ್ಮಾಸ್ಯವನ್ನು ವ್ಯಂಗ್ಯ ಮಾಡಿದವರು ಆ ಫೋಟೊದಲ್ಲಿ ಕಾಣಲಿಲ್ಲ..!

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

5 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

5 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

6 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

8 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

19 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

19 hours ago