Advertisement
ಸುದ್ದಿಗಳು

#ಚಾತುರ್ಮಾಸ್ಯ | ಸತ್ಕಾರ್ಯಗಳಿಂದ ಜೀವನ ಸಾರ್ಥಕ: ರಾಘವೇಶ್ವರ ಶ್ರೀ

Share

ಭಗವತ್ ಪ್ರೀತಿ, ಲೋಕಪ್ರೀತಿ ಎಲ್ಲಕ್ಕಿಂತ ಹೆಚ್ಚಾಗಿ ಆತ್ಮಕ್ಕೆ ಪ್ರಿಯವಾಗುವ ಸತ್ಕಾರ್ಯಗಳನ್ನು ಮಾಡಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

Advertisement
Advertisement

ಚಾತುರ್ಮಾಸ್ಯ ಸಂದರ್ಭದಲ್ಲಿ ಶಿಷ್ಯರು ಆಯೋಜಿಸಿದ್ದ ಪರಮಪೂಜ್ಯರ 49ನೇ ವರ್ಧಂತ್ಯುತ್ಸವದಲ್ಲಿ ಆಶೀರ್ವಚನ ನೀಡಿದ ಅವರು, “ಮನುಷ್ಯ ಜನ್ಮ ದೊಡ್ಡದು. ಮನುಷ್ಯ ತನ್ನ ಜೀವನದಲ್ಲಿ ದೇವರೂ ಆಗಬಲ್ಲ; ದಾನವನೂ ಆಗಬಲ್ಲ. ಸತ್ಕಾರ್ಯಗಳ ಮೂಲಕ ಜೀವನವನ್ನು ಮುಕ್ತಿಯ ಪಥವಾಗಿ ಮಾಡಿಕೊಳ್ಳುವ ಆಯ್ಕೆ ನಮಗೆ ಸಿಕ್ಕಿದೆ. ಇದನ್ನು ವ್ಯರ್ಥಪಡಿಸಿಕೊಳ್ಳಬೇಡಿ” ಎಂದು ಸಲಹೆ ಮಾಡಿದರು.

ಆಯಸ್ಸು ಅಮೂಲ್ಯ. ಆಯಸ್ಸೆಂಬ ಸುವರ್ಣದ್ರವವನ್ನು ವ್ಯರ್ಥವಾಗಿ ಚೆಲ್ಲುವುದು ನಮ್ಮ ಮೂರ್ಖತನ. ಸದೃಢವಾಗಿದ್ದಾಗಲೇ ಹೆಚ್ಚು ಹೆಚ್ಚು ಸೇವೆ ಸತ್ಕಾರ್ಯಗಳ ಮೂಲಕ ಪರಮಾತ್ಮನಿಗೆ ಹತ್ತಿರವಾಗುವ ಪ್ರಯತ್ನ ಮಾಡೋಣ ಎಂದರು. ಯೋಗಿ ಯೋಗದಿಂದ ಮುಕ್ತಿ ಸಾಧಿಸಿದರೆ ಯೋಧ ಯುದ್ಧದಿಂದ ಅದನ್ನು ಸಾಧಿಸುತ್ತಾನೆ. ಇಬ್ಬರೂ ಸೇರುವುದು ಒಂದೆಡೆಗೆ. ನಿಸ್ವಾರ್ಥವಾಗಿ ಸೇವೆ ಮಾಡುವ ಎಲ್ಲರೂ ಬ್ರಹ್ಮತ್ವವನ್ನೇ ಪಡೆಯುತ್ತಾರೆ ಎಂದು ವಿಶ್ಲೇಷಿಸಿದರು. ಜೀವನದಲ್ಲಿ ಇನ್ನೊಬ್ಬರಿಗೆ ಒಳ್ಳೆಯದು ಮಾಡಿದರೆ, ಒಳ್ಳೆಯದು ಬಯಸಿದರೆ ನಮಗೂ ಅದೇ ಸಿಗುತ್ತದೆ. ನಾವು ಬಿತ್ತಿದ್ದನ್ನೇ ಫಲವಾಗಿ ಪಡೆಯುತ್ತೇವೆ ಎಂದರು.

ಶ್ರೀಗಳ ವರ್ಧಂತಿ ಉತ್ಸವ ಶುಭಸಂದರ್ಭದಲ್ಲಿ ಶ್ರೀಮಠದ ಶ್ರೀಪರಿವಾರಕ್ಕಾಗಿ ನಿರ್ಮಿಸಲಾಗಿರುವ ಸುಸಜ್ಜಿತ ಭೋಜನಶಾಲೆ ಮತ್ತು ಪಾಕಶಾಲೆಯನ್ನು ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮಕರ್ತ ಶ್ರೀ ಭೀಮೇಶ್ವರ ಜೋಶಿ ಲೋಕಾರ್ಪಣೆ ಮಾಡಿದರು. ಅವರ ಕುಟುಂಬದವರಿಂದ ಇದೇ ಸಂದರ್ಭದಲ್ಲಿ ಭಿಕ್ಷಾಸೇವೆಯೂ ನೆರವೇರಿತು.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ದೇವವ್ರತ ಶರ್ಮಾ, ಸತ್ಯನಾರಾಯಣ ಶರ್ಮಾ, ಜನಾರ್ದನ ಭಟ್ ಹಾಗೂ ಮಹಾಬಲ ಭಟ್ ಅವರನ್ನು ಸಾಧನ ಸನ್ಮಾನ ನೀಡಿ ಗೌರವಿಸಲಾಯಿತು.

ಶ್ರೀಗಳ ವರ್ಧಂತಿ ಉತ್ಸವ ಅಂಗವಾಗಿ ವೈದಿಕ ಸಮಾವೇಶ ಮತ್ತು ನೂರಾರು ಭಕ್ತರಿಂದ ಶ್ರೀಗಳಿಗೆ ಮಂತ್ರಸಹಿತ ಅರುಣ ಗುರು ನಮಸ್ಕಾರ ಸಮರ್ಪಣೆ ನಡೆಯಿತು. ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ್ ಭಾಸ್ಕರ ಹೆಗಡೆ ಪ್ರಾಸ್ತಾವಿಕ ಭಾಷಣ ಮಾಡಿದರು. ವರ್ಧಂತಿ ಉತ್ಸವದಂದು ವಿಶೇಷವಾಗಿ ಶ್ರೀಮಾತೆ ಪರಮಪೂಜ್ಯರಿಗೆ ಮಂಗಳಾರತಿ ನೆರವೇರಿಸಿದರು. ಧರ್ಮಭಾರತಿ ಭಾವರಾಮಾಯಣದ 5ನೇ ಕಂತಿನ ಬಿಡುಗಡೆಯನ್ನು ಶ್ರೀ ಭೀಮೇಶ್ವರ ಜೋಶಿ ದಂಪತಿ ನೆರವೇರಿಸಿದರು.

ಹವ್ಯಕ ಮಹಾಮಂಡಲ ಮಾಜಿ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಗೌರವ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಯು.ಎಸ್.ಗಣಪತಿ ಭಟ್, ಪದಾಧಿಕಾರಿಗಳಾದ ಶ್ರೀಕಾಂತ ಪಂಡಿತ್, ಮಂಜುನಾಥ ಸುವರ್ಣಗದ್ದೆ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ನಗರಸಭೆ ಸದಸ್ಯ ಶ್ರೀಶ ಕೊಡವೂರು ಚಾತುರ್ಮಾಸ್ಯ ಸಂದರ್ಭದಲ್ಲಿ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

15 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

16 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

16 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

16 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

16 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

17 hours ago