Advertisement
ಸುದ್ದಿಗಳು

#ಚಾತುರ್ಮಾಸ್ಯ | ಸತ್ಕಾರ್ಯಗಳಿಂದ ಜೀವನ ಸಾರ್ಥಕ: ರಾಘವೇಶ್ವರ ಶ್ರೀ

Share

ಭಗವತ್ ಪ್ರೀತಿ, ಲೋಕಪ್ರೀತಿ ಎಲ್ಲಕ್ಕಿಂತ ಹೆಚ್ಚಾಗಿ ಆತ್ಮಕ್ಕೆ ಪ್ರಿಯವಾಗುವ ಸತ್ಕಾರ್ಯಗಳನ್ನು ಮಾಡಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

ಚಾತುರ್ಮಾಸ್ಯ ಸಂದರ್ಭದಲ್ಲಿ ಶಿಷ್ಯರು ಆಯೋಜಿಸಿದ್ದ ಪರಮಪೂಜ್ಯರ 49ನೇ ವರ್ಧಂತ್ಯುತ್ಸವದಲ್ಲಿ ಆಶೀರ್ವಚನ ನೀಡಿದ ಅವರು, “ಮನುಷ್ಯ ಜನ್ಮ ದೊಡ್ಡದು. ಮನುಷ್ಯ ತನ್ನ ಜೀವನದಲ್ಲಿ ದೇವರೂ ಆಗಬಲ್ಲ; ದಾನವನೂ ಆಗಬಲ್ಲ. ಸತ್ಕಾರ್ಯಗಳ ಮೂಲಕ ಜೀವನವನ್ನು ಮುಕ್ತಿಯ ಪಥವಾಗಿ ಮಾಡಿಕೊಳ್ಳುವ ಆಯ್ಕೆ ನಮಗೆ ಸಿಕ್ಕಿದೆ. ಇದನ್ನು ವ್ಯರ್ಥಪಡಿಸಿಕೊಳ್ಳಬೇಡಿ” ಎಂದು ಸಲಹೆ ಮಾಡಿದರು.

ಆಯಸ್ಸು ಅಮೂಲ್ಯ. ಆಯಸ್ಸೆಂಬ ಸುವರ್ಣದ್ರವವನ್ನು ವ್ಯರ್ಥವಾಗಿ ಚೆಲ್ಲುವುದು ನಮ್ಮ ಮೂರ್ಖತನ. ಸದೃಢವಾಗಿದ್ದಾಗಲೇ ಹೆಚ್ಚು ಹೆಚ್ಚು ಸೇವೆ ಸತ್ಕಾರ್ಯಗಳ ಮೂಲಕ ಪರಮಾತ್ಮನಿಗೆ ಹತ್ತಿರವಾಗುವ ಪ್ರಯತ್ನ ಮಾಡೋಣ ಎಂದರು. ಯೋಗಿ ಯೋಗದಿಂದ ಮುಕ್ತಿ ಸಾಧಿಸಿದರೆ ಯೋಧ ಯುದ್ಧದಿಂದ ಅದನ್ನು ಸಾಧಿಸುತ್ತಾನೆ. ಇಬ್ಬರೂ ಸೇರುವುದು ಒಂದೆಡೆಗೆ. ನಿಸ್ವಾರ್ಥವಾಗಿ ಸೇವೆ ಮಾಡುವ ಎಲ್ಲರೂ ಬ್ರಹ್ಮತ್ವವನ್ನೇ ಪಡೆಯುತ್ತಾರೆ ಎಂದು ವಿಶ್ಲೇಷಿಸಿದರು. ಜೀವನದಲ್ಲಿ ಇನ್ನೊಬ್ಬರಿಗೆ ಒಳ್ಳೆಯದು ಮಾಡಿದರೆ, ಒಳ್ಳೆಯದು ಬಯಸಿದರೆ ನಮಗೂ ಅದೇ ಸಿಗುತ್ತದೆ. ನಾವು ಬಿತ್ತಿದ್ದನ್ನೇ ಫಲವಾಗಿ ಪಡೆಯುತ್ತೇವೆ ಎಂದರು.

ಶ್ರೀಗಳ ವರ್ಧಂತಿ ಉತ್ಸವ ಶುಭಸಂದರ್ಭದಲ್ಲಿ ಶ್ರೀಮಠದ ಶ್ರೀಪರಿವಾರಕ್ಕಾಗಿ ನಿರ್ಮಿಸಲಾಗಿರುವ ಸುಸಜ್ಜಿತ ಭೋಜನಶಾಲೆ ಮತ್ತು ಪಾಕಶಾಲೆಯನ್ನು ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದ ಧರ್ಮಕರ್ತ ಶ್ರೀ ಭೀಮೇಶ್ವರ ಜೋಶಿ ಲೋಕಾರ್ಪಣೆ ಮಾಡಿದರು. ಅವರ ಕುಟುಂಬದವರಿಂದ ಇದೇ ಸಂದರ್ಭದಲ್ಲಿ ಭಿಕ್ಷಾಸೇವೆಯೂ ನೆರವೇರಿತು.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ದೇವವ್ರತ ಶರ್ಮಾ, ಸತ್ಯನಾರಾಯಣ ಶರ್ಮಾ, ಜನಾರ್ದನ ಭಟ್ ಹಾಗೂ ಮಹಾಬಲ ಭಟ್ ಅವರನ್ನು ಸಾಧನ ಸನ್ಮಾನ ನೀಡಿ ಗೌರವಿಸಲಾಯಿತು.

ಶ್ರೀಗಳ ವರ್ಧಂತಿ ಉತ್ಸವ ಅಂಗವಾಗಿ ವೈದಿಕ ಸಮಾವೇಶ ಮತ್ತು ನೂರಾರು ಭಕ್ತರಿಂದ ಶ್ರೀಗಳಿಗೆ ಮಂತ್ರಸಹಿತ ಅರುಣ ಗುರು ನಮಸ್ಕಾರ ಸಮರ್ಪಣೆ ನಡೆಯಿತು. ಹವ್ಯಕ ಮಹಾಮಂಡಲ ಅಧ್ಯಕ್ಷ ಮೋಹನ್ ಭಾಸ್ಕರ ಹೆಗಡೆ ಪ್ರಾಸ್ತಾವಿಕ ಭಾಷಣ ಮಾಡಿದರು. ವರ್ಧಂತಿ ಉತ್ಸವದಂದು ವಿಶೇಷವಾಗಿ ಶ್ರೀಮಾತೆ ಪರಮಪೂಜ್ಯರಿಗೆ ಮಂಗಳಾರತಿ ನೆರವೇರಿಸಿದರು. ಧರ್ಮಭಾರತಿ ಭಾವರಾಮಾಯಣದ 5ನೇ ಕಂತಿನ ಬಿಡುಗಡೆಯನ್ನು ಶ್ರೀ ಭೀಮೇಶ್ವರ ಜೋಶಿ ದಂಪತಿ ನೆರವೇರಿಸಿದರು.

ಹವ್ಯಕ ಮಹಾಮಂಡಲ ಮಾಜಿ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಗೌರವ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಯು.ಎಸ್.ಗಣಪತಿ ಭಟ್, ಪದಾಧಿಕಾರಿಗಳಾದ ಶ್ರೀಕಾಂತ ಪಂಡಿತ್, ಮಂಜುನಾಥ ಸುವರ್ಣಗದ್ದೆ ಮತ್ತಿತರರು ಉಪಸ್ಥಿತರಿದ್ದರು. ಉಡುಪಿ ನಗರಸಭೆ ಸದಸ್ಯ ಶ್ರೀಶ ಕೊಡವೂರು ಚಾತುರ್ಮಾಸ್ಯ ಸಂದರ್ಭದಲ್ಲಿ ಶ್ರೀಗಳಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅನ್ನವೇ ಜೀವನ, ಅನ್ನವೇ ಮೃತ್ಯು

ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…

13 minutes ago

ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ

ಎಥೆನಾಲ್‌ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…

24 minutes ago

ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ

ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…

37 minutes ago

ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ

ಅಕ್ರಮ ಅಡಿಕೆ ಆಮದು, ಜಿಎಸ್‌ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…

51 minutes ago

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

10 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

14 hours ago