ಸುದ್ದಿಗಳು

ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಮುಹೂರ್ತ| ಜೂ.11ರಂದು ಶಕ್ತಿ ಯೋಜನೆಗೆ ಚಾಲನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಾಂಗ್ರಸ್ ನೀಡಿದ ಉಚಿತ ಭರವಸೆಗಳ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ನಾಳೆ (ಜೂ.11) ರಂದು ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1 ‌ಗಂಟೆಯ ನಂತರ ಮಹಿಳೆಯರು ಉಚಿತವಾಗಿ ಬಸ್​​ನಲ್ಲಿ ಪ್ರಯಾಣ ಮಾಡಬಹುದಾಗಿದೆ.

Advertisement

ನಾಳೆಯಿಂದ ಮಹಿಳೆಯರು ರಾಜ್ಯದ‌ ಒಳಗೆ‌ ಎಲ್ಲಿಂದ ಎಲ್ಲಿಗೆ ಬೇಕಾದರೂ, ಎಷ್ಟು ಬಾರಿ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆದರೆ ರಾಜ್ಯದ ಒಳಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ‌ಮಾತ್ರ ಪ್ರಯಾಣಿಸಬೇಕು. ನಾಲ್ಕು ನಿಗಮದ ಎಸಿ ಬಸ್ ಹೊರತುಪಡಿಸಿ ಎಲ್ಲಾ ವೇಗದೂತ ಸೇರಿದಂತೆ ನಾರ್ಮಲ್​ ಬಸ್​​ಗಳಲ್ಲಿ ಪ್ರಯಾಣ ಮಾಡಬಹುದಾಗಿದೆ. ಹೊರ ರಾಜ್ಯಗಳಿಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ.

ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ‌ಲೈಸನ್ಸ್, ಕೇಂದ್ರ ಸರ್ಕಾರ ಅಥವಾ ‌ರಾಜ್ಯ ಸರ್ಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ. ಇವುಗಳಲ್ಲಿ ಯಾವುದಾದರೂ ಒಂದು ತೋರಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ.

ನಾಳೆಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯಬಹುದಾಗಿದೆ. ಮಹಿಳೆಯರು ಬಿಎಂಟಿಸಿ ಹೊರತು ಪಡಿಸಿ ನಾರ್ಮಲ್ ಬಸ್ಸುಗಳಲ್ಲು ಸೀಟ್ ಬುಕ್ಕಿಂಗ್ ಮಾಡಿಕೊಂಡು ಪ್ರಯಾಣ ಮಾಡಬಹುದಾಗಿದೆ. ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಲು 3 ತಿಂಗಳು ಸಮಯಾವಕಾಶವಿದೆ. 3 ತಿಂಗಳ ನಂತರ ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.

ಮಹಿಳಾ ಪ್ರಯಾಣಿಕರು ಉಚಿತ ಲಗೇಜ್ ಮಿತಿಯನ್ನು ಹೊರತುಪಡಿಸಿ ಹೆಚ್ಚುವರಿ ಲಗೇಜ್ ತೆಗೆದುಕೊಂಡು ಹೋದಲ್ಲಿ ನಿಯಮಾನುಸಾರ ‌ಟಿಕೆಟ್ ದರ ವಸೂಲಿ‌ ಮಾಡಲಾಗುತ್ತದೆ. ಉಚಿತ ಬಸ್ ಪ್ರಯಾಣದ ಕಾರಣಕ್ಕೆ ಬಿಎಂಟಿಸಿ ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಶೇ 50 ರಷ್ಟು ಪುರುಷರಿಗೆ ಮೀಸಲಾತಿ ಇದೆ.ಉಚಿತ ಪ್ರಯಾಣ ಮಹಿಳೆ ಪ್ರಯಾಣಿಕರ ಜೊತೆ ನಿಲುಗಡೆ ವಿಚಾರದಲ್ಲಿ ಕಿರಿಕಿರಿ ಮಾಡದಂತೆ ಸೂಚನೆ ನೀಡಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

10 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

11 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

20 hours ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

20 hours ago

ದೆಹಲಿಯಲ್ಲಿ ಹೀಟ್‌ವೇವ್‌ , ಬಿಹಾರದಲ್ಲಿ ಮಳೆ, ಕರ್ನಾಟಕದಲ್ಲಿ ಬಿಸಿ ಗಾಳಿ ಎಚ್ಚರಿಕೆ |

ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…

23 hours ago