Advertisement
ಸುದ್ದಿಗಳು

ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ಮುಹೂರ್ತ| ಜೂ.11ರಂದು ಶಕ್ತಿ ಯೋಜನೆಗೆ ಚಾಲನೆ

Share

ಕಾಂಗ್ರಸ್ ನೀಡಿದ ಉಚಿತ ಭರವಸೆಗಳ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ನಾಳೆ (ಜೂ.11) ರಂದು ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನ 1 ‌ಗಂಟೆಯ ನಂತರ ಮಹಿಳೆಯರು ಉಚಿತವಾಗಿ ಬಸ್​​ನಲ್ಲಿ ಪ್ರಯಾಣ ಮಾಡಬಹುದಾಗಿದೆ.

Advertisement

ನಾಳೆಯಿಂದ ಮಹಿಳೆಯರು ರಾಜ್ಯದ‌ ಒಳಗೆ‌ ಎಲ್ಲಿಂದ ಎಲ್ಲಿಗೆ ಬೇಕಾದರೂ, ಎಷ್ಟು ಬಾರಿ ಬೇಕಾದರೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆದರೆ ರಾಜ್ಯದ ಒಳಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ‌ಮಾತ್ರ ಪ್ರಯಾಣಿಸಬೇಕು. ನಾಲ್ಕು ನಿಗಮದ ಎಸಿ ಬಸ್ ಹೊರತುಪಡಿಸಿ ಎಲ್ಲಾ ವೇಗದೂತ ಸೇರಿದಂತೆ ನಾರ್ಮಲ್​ ಬಸ್​​ಗಳಲ್ಲಿ ಪ್ರಯಾಣ ಮಾಡಬಹುದಾಗಿದೆ. ಹೊರ ರಾಜ್ಯಗಳಿಗೆ ಸಂಚಾರ ಮಾಡುವ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿರುವುದಿಲ್ಲ.

ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ‌ಲೈಸನ್ಸ್, ಕೇಂದ್ರ ಸರ್ಕಾರ ಅಥವಾ ‌ರಾಜ್ಯ ಸರ್ಕಾರ ನೀಡಿರುವ ವಾಸಸ್ಥಳದ ಗುರುತಿನ ಚೀಟಿ. ಇವುಗಳಲ್ಲಿ ಯಾವುದಾದರೂ ಒಂದು ತೋರಿಸಿ ಉಚಿತ ಪ್ರಯಾಣ ಮಾಡಬಹುದಾಗಿದೆ.

ನಾಳೆಯಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆಯಬಹುದಾಗಿದೆ. ಮಹಿಳೆಯರು ಬಿಎಂಟಿಸಿ ಹೊರತು ಪಡಿಸಿ ನಾರ್ಮಲ್ ಬಸ್ಸುಗಳಲ್ಲು ಸೀಟ್ ಬುಕ್ಕಿಂಗ್ ಮಾಡಿಕೊಂಡು ಪ್ರಯಾಣ ಮಾಡಬಹುದಾಗಿದೆ. ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಲು 3 ತಿಂಗಳು ಸಮಯಾವಕಾಶವಿದೆ. 3 ತಿಂಗಳ ನಂತರ ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.

ಮಹಿಳಾ ಪ್ರಯಾಣಿಕರು ಉಚಿತ ಲಗೇಜ್ ಮಿತಿಯನ್ನು ಹೊರತುಪಡಿಸಿ ಹೆಚ್ಚುವರಿ ಲಗೇಜ್ ತೆಗೆದುಕೊಂಡು ಹೋದಲ್ಲಿ ನಿಯಮಾನುಸಾರ ‌ಟಿಕೆಟ್ ದರ ವಸೂಲಿ‌ ಮಾಡಲಾಗುತ್ತದೆ. ಉಚಿತ ಬಸ್ ಪ್ರಯಾಣದ ಕಾರಣಕ್ಕೆ ಬಿಎಂಟಿಸಿ ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಶೇ 50 ರಷ್ಟು ಪುರುಷರಿಗೆ ಮೀಸಲಾತಿ ಇದೆ.ಉಚಿತ ಪ್ರಯಾಣ ಮಹಿಳೆ ಪ್ರಯಾಣಿಕರ ಜೊತೆ ನಿಲುಗಡೆ ವಿಚಾರದಲ್ಲಿ ಕಿರಿಕಿರಿ ಮಾಡದಂತೆ ಸೂಚನೆ ನೀಡಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

5 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

19 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

20 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

20 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

20 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

20 hours ago