ಕಳೆದ ಎರಡು ವಾರಗಳಿಂದ ಕೊಡಗು ಜಿಲ್ಲೆಯ ಚೆಂಬು ಭೂಕಂಪನದ ಮೂಲಕ ಗಮನ ಸೆಳೆಯಿತು. ಚೆಂಬು, ಸಂಪಾಜೆ ಸೇರಿದಂತೆ ಆಸುಪಾಸಿನ ಪ್ರದೇಶಗಳು ರಾಜ್ಯಾದ್ಯಂತ ಸುದ್ದಿಯಾಯಿತು. ಆದರೆ ಇಂದಿಗೂ ಆ ಊರಿನ ಕೆಲವು ಕಡೆ ಮೂಲಭೂತ ಸೌಲಭ್ಯಗಳ ಆವಶ್ಯಕತೆ ಇದೆ. ಚೆಂಬು ಗ್ರಾಮದ ಕಟ್ಟಪಲ್ಲಿ ಎಂಬಲ್ಲಿನ ಹೊಳೆ ದಾಟಲು ಜನರು ಸಂಕಷ್ಟ ಪಡುತ್ತಿದ್ದಾರೆ. ಜೀಪೊಂದು ನೀರು ದಾಟಿ ಹೋಗುವ ಈ ವಿಡಿಯೋ ಈಗ ಗಮನಸೆಳೆದಿದೆ.
ಕೊಡಗು ಜಿಲ್ಲೆಯ ಚೆಂಬು ಹಾಗೂ ಸುಳ್ಯ ತಾಲೂಕಿನ ಸಂಪಾಜೆ ಮೊದಲಾದ ಪ್ರದೇಶಗಳೂ ಭೂಕಂಪನದ ಮೂಲಕ ಸುದ್ದಿಯಾಯಿತು. ಭೂಕಂಪನಕ್ಕೆ ವಿವಿಧ ಕಾರಣಗಳನ್ನು ಹೇಳಲಾಯಿತು. ಚೆಂಬು, ಸಂಪಾಜೆ ಪ್ರದೇಶದಲ್ಲಿ ಕೃಷಿಯೇ ಪ್ರಮುಖವಾದ ಆದಾಯದ ಮೂಲ. ಆದರೆ ಅಡಿಕೆ ಹಳದಿ ಎಲೆ ರೋಗದ ನಂತರ ಅಡಿಕೆ ಕೃಷಿ ಕಡಿಮೆಯಾಗಿದೆ. ಅದರ ಬದಲಾಗಿ ರಬ್ಬರ್ ಕೃಷಿ ವಿಸ್ತಾರವಾಗಿದೆ. ಗುಡ್ಡದಿಂದ ಹಿಡಿದು ತೋಟವದರೆಗೂ ರಬ್ಬರ್ ಕೃಷಿ ಇದೆ. ಇಲ್ಲಿನ ಕೃಷಿ ಸಮಸ್ಯೆ , ಕೃಷಿಪಲ್ಲಟದ ಜೊತೆಗೆ ಇಲ್ಲಿ ಮೂಲಭೂತ ಆವಶ್ಯಕತೆಗಳ ಕೊರತೆ ಜನರನ್ನು ಕಾಡುತ್ತಿದೆ. ಚೆಂಬು ಗ್ರಾಮದ ಕಟ್ಟಪಲ್ಲಿ ಎಂಬಲ್ಲಿ ಸುಮಾರು 25 ಮನೆಗಳು ಇವೆ. ಇಲ್ಲಿ ಹರಿಯುವ ಹೊಳೆಯ ಕಾರಣದಿಂದ ಮಳೆಗಾಲ ದಾಟಲು ಸಮಸ್ಯೆಯಾಗುತ್ತದೆ. ಹೊಳೆ ದಾಟಿದ ಮುಂದೆ ಉಂಬಳ್ಳೆ ಎಂಬ ಪ್ರದೇಶ ಇದೆ. ಹಲವಾರು ಸಮಯಗಳಿಂದಲೂ ಇಲ್ಲಿನ ಜನ ಈ ಸಮಸ್ಯೆ ಅನುಭವಿಸುತ್ತಿದ್ದಾರೆ. ಇಲ್ಲಿ ಹೆಚ್ಚು ನೀರು ಹರಿದಾಗ ಯಾವುದೇ ವಾಹನ ದಾಟುವುದಿಲ್ಲ, ಈ ಸಂದರ್ಭ ಸುತ್ತು ಬಳಸಿ ಪರ್ಯಾಯ ದಾರಿ ಬಳಸುತ್ತಾರೆ ಕಟ್ಟಪಲ್ಲಿಯ ಜನರು. ಈ ಪ್ರದೇಶದಲ್ಲಿ ಮಲೆಕುಡಿಯ ಸಮುದಾಯದ ಕುಟುಂಬಗಳು ಹೆಚ್ಚಿದೆ.
ಭೂಕಂಪನದ ಸುದ್ದಿಯ ಜೊತೆಗೆ ಮೂಲಭೂತ ಸಮಸ್ಯೆಗಳ ಬಗ್ಗೆಯೂ ಈಗ ಜನರು ಮಾತನಾಡುತ್ತಿದ್ದಾರೆ. ಒಂದು ವೇಳೆ ತುರ್ತಾಗಿ ಇಲ್ಲಿಂದ ಸ್ಥಳಾಂತರವಾಗಬೇಕಾಗಿ ಬಂದರೆ ಸಂಪರ್ಕ ಹೇಗೆ ಎನ್ನುವುದು ಕೂಡಾ ಪ್ರಶ್ನೆಯಾಗಿದೆ ಎಂದು ಕೇಳುತ್ತಾರೆ ಇಲ್ಲಿನ ಜನರು.ಸದ್ದಿಲ್ಲದೆ ಸುದ್ದಿಯಾದ ಭೂಕಂಪನ ಬಳಿಕ ಚೆಂಬು ಗ್ರಾಮ ಸುದ್ದಿಯಾಗಿದೆ. ಇದೀಗ ಗ್ರಾಮೀಣ ಭಾಗದ ಇಂತಹ ಮೂಲಭೂತ ಸಮಸ್ಯೆಗಳ ಕಡೆಗೂ ಆಡಳಿತ ಗಮನಿಸಬೇಕಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…