Advertisement
ಸುದ್ದಿಗಳು

ಭೂಕಂಪನದಿಂದ ಸುದ್ದಿಯಾದ ಚೆಂಬು ಪ್ರದೇಶದಲ್ಲಿ ಈ ಸ್ಥಿತಿ ಇದೆ….! | ಮೂಲಭೂತ ಆವಶ್ಯಕತೆಗಳ ಕಡೆಗೆ ಗಮನ ಅಗತ್ಯ… !

Share

ಕಳೆದ ಎರಡು ವಾರಗಳಿಂದ ಕೊಡಗು ಜಿಲ್ಲೆಯ ಚೆಂಬು ಭೂಕಂಪನದ ಮೂಲಕ ಗಮನ ಸೆಳೆಯಿತು. ಚೆಂಬು, ಸಂಪಾಜೆ ಸೇರಿದಂತೆ ಆಸುಪಾಸಿನ ಪ್ರದೇಶಗಳು ರಾಜ್ಯಾದ್ಯಂತ ಸುದ್ದಿಯಾಯಿತು. ಆದರೆ ಇಂದಿಗೂ ಆ ಊರಿನ ಕೆಲವು ಕಡೆ ಮೂಲಭೂತ ಸೌಲಭ್ಯಗಳ ಆವಶ್ಯಕತೆ ಇದೆ.  ಚೆಂಬು ಗ್ರಾಮದ ಕಟ್ಟಪಲ್ಲಿ ಎಂಬಲ್ಲಿನ ಹೊಳೆ ದಾಟಲು ಜನರು ಸಂಕಷ್ಟ ಪಡುತ್ತಿದ್ದಾರೆ. ಜೀಪೊಂದು ನೀರು ದಾಟಿ ಹೋಗುವ ಈ ವಿಡಿಯೋ ಈಗ ಗಮನಸೆಳೆದಿದೆ.

ಕೊಡಗು ಜಿಲ್ಲೆಯ ಚೆಂಬು ಹಾಗೂ ಸುಳ್ಯ ತಾಲೂಕಿನ ಸಂಪಾಜೆ ಮೊದಲಾದ ಪ್ರದೇಶಗಳೂ ಭೂಕಂಪನದ ಮೂಲಕ ಸುದ್ದಿಯಾಯಿತು. ಭೂಕಂಪನಕ್ಕೆ ವಿವಿಧ ಕಾರಣಗಳನ್ನು  ಹೇಳಲಾಯಿತು. ಚೆಂಬು, ಸಂಪಾಜೆ ಪ್ರದೇಶದಲ್ಲಿ ಕೃಷಿಯೇ ಪ್ರಮುಖವಾದ ಆದಾಯದ ಮೂಲ. ಆದರೆ ಅಡಿಕೆ ಹಳದಿ ಎಲೆ ರೋಗದ ನಂತರ ಅಡಿಕೆ ಕೃಷಿ ಕಡಿಮೆಯಾಗಿದೆ. ಅದರ ಬದಲಾಗಿ ರಬ್ಬರ್‌ ಕೃಷಿ ವಿಸ್ತಾರವಾಗಿದೆ. ಗುಡ್ಡದಿಂದ ಹಿಡಿದು ತೋಟವದರೆಗೂ ರಬ್ಬರ್‌ ಕೃಷಿ ಇದೆ. ಇಲ್ಲಿನ ಕೃಷಿ ಸಮಸ್ಯೆ , ಕೃಷಿಪಲ್ಲಟದ ಜೊತೆಗೆ ಇಲ್ಲಿ  ಮೂಲಭೂತ ಆವಶ್ಯಕತೆಗಳ ಕೊರತೆ ಜನರನ್ನು ಕಾಡುತ್ತಿದೆ. ಚೆಂಬು ಗ್ರಾಮದ ಕಟ್ಟಪಲ್ಲಿ ಎಂಬಲ್ಲಿ  ಸುಮಾರು 25 ಮನೆಗಳು ಇವೆ. ಇಲ್ಲಿ  ಹರಿಯುವ ಹೊಳೆಯ ಕಾರಣದಿಂದ ಮಳೆಗಾಲ ದಾಟಲು ಸಮಸ್ಯೆಯಾಗುತ್ತದೆ. ಹೊಳೆ ದಾಟಿದ ಮುಂದೆ ಉಂಬಳ್ಳೆ ಎಂಬ ಪ್ರದೇಶ ಇದೆ. ಹಲವಾರು ಸಮಯಗಳಿಂದಲೂ ಇಲ್ಲಿನ ಜನ ಈ ಸಮಸ್ಯೆ ಅನುಭವಿಸುತ್ತಿದ್ದಾರೆ. ಇಲ್ಲಿ ಹೆಚ್ಚು ನೀರು ಹರಿದಾಗ ಯಾವುದೇ ವಾಹನ ದಾಟುವುದಿಲ್ಲ, ಈ ಸಂದರ್ಭ ಸುತ್ತು ಬಳಸಿ ಪರ್ಯಾಯ ದಾರಿ ಬಳಸುತ್ತಾರೆ ಕಟ್ಟಪಲ್ಲಿಯ ಜನರು. ಈ ಪ್ರದೇಶದಲ್ಲಿ  ಮಲೆಕುಡಿಯ ಸಮುದಾಯದ ಕುಟುಂಬಗಳು ಹೆಚ್ಚಿದೆ.

ಭೂಕಂಪನದ ಸುದ್ದಿಯ ಜೊತೆಗೆ ಮೂಲಭೂತ ಸಮಸ್ಯೆಗಳ ಬಗ್ಗೆಯೂ ಈಗ ಜನರು ಮಾತನಾಡುತ್ತಿದ್ದಾರೆ. ಒಂದು ವೇಳೆ ತುರ್ತಾಗಿ ಇಲ್ಲಿಂದ ಸ್ಥಳಾಂತರವಾಗಬೇಕಾಗಿ ಬಂದರೆ ಸಂಪರ್ಕ ಹೇಗೆ ಎನ್ನುವುದು  ಕೂಡಾ ಪ್ರಶ್ನೆಯಾಗಿದೆ ಎಂದು  ಕೇಳುತ್ತಾರೆ ಇಲ್ಲಿನ ಜನರು.ಸದ್ದಿಲ್ಲದೆ ಸುದ್ದಿಯಾದ ಭೂಕಂಪನ ಬಳಿಕ ಚೆಂಬು ಗ್ರಾಮ ಸುದ್ದಿಯಾಗಿದೆ. ಇದೀಗ ಗ್ರಾಮೀಣ ಭಾಗದ ಇಂತಹ ಮೂಲಭೂತ ಸಮಸ್ಯೆಗಳ ಕಡೆಗೂ ಆಡಳಿತ ಗಮನಿಸಬೇಕಿದೆ.

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

20 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

23 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago