Advertisement
Exclusive - Mirror Hunt

ಚೆಂಬು-ಸಂಪಾಜೆಯಲ್ಲಿ “ಚಾರ್ಲಿ” ನೆನಪು.. ! | ಮನೆಯವರ ಜೊತೆಗೇ ಓಡುವ ನಾಯಿ…. ! |ಭೂಕಂಪನದ ಭಯದ ನಡುವೆ ಈ ಸಂಬಂಧಗಳಿಗೆ ಏನು ಹೇಳೋಣ…. ? |

Share

ಕಳೆದ ಕೆಲವು ದಿನಗಳಿಂದ ಕೊಡಗಿನ ಚೆಂಬು, ಸುಳ್ಯದ ಸಂಪಾಜೆ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ  ಭಯದ ವಾತಾವರಣ ಇದೆ. ಹೀಗಾಗಿ ಉದ್ಯೋಗದಲ್ಲಿ ಇರುವ ಕೆಲವರು ತಮ್ಮ ಮನೆಯಲ್ಲಿರುವ ಸಾಮಾಗ್ರಿಗಳ ಸಾಗಾಟ ಮಾಡುತ್ತಿದ್ದಾರೆ. ನಗರ ಪ್ರದೇಶದಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸಾಕು ಪ್ರಾಣಿಗಳ ಒಡನಾಟ ವಿವರಿಸಲು ಸಾಧ್ಯವಿಲ್ಲ. ಈ ವೇಳೆ ಚಾರ್ಲಿ ಸಿನಿಮಾ ನೆನಪಿಗೆ ಬರುತ್ತಿದೆ.

ಎಂ ಚೆಂಬು ಪ್ರದೇಶದಲ್ಲಿ ಕೃಷಿ ಭೂಮಿ ಹೊಂದಿದ್ದ ಕುಟುಂಬವೊಂದು ಕಳೆದ ಕೆಲವು ದಿನಗಳ ಭೂಕಂಪನ ಹಾಗೂ ಭಾರೀ ಮಳೆಯ ಕಾರಣದಿಂದ ಕೃಷಿ ಹಾಗೂ ಮನೆಯನ್ನು ಮಳೆಗಾಲ ಮುಗಿಯುವರೆಗೆ ಬಿಟ್ಟು ನಗರದಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿತು. ಹೀಗಾಗಿ ಮನೆಯಲ್ಲಿರುವ ವಸ್ತುಗಳ ಸಾಗಾಟವನ್ನು ಮಾಡುತ್ತಿದ್ದಾಗ ಸಂಜೆ ವೇಳೆ ಮನೆಯವರು ಅಟೋ ಮೂಲಕ ಸಾಗಿದರು. ಈ ಸಮಯದಲ್ಲಿ  ಮನೆಯ ಸಾಕು ನಾಯಿ ಅಟೋ ಜೊತೆ ಸುಮಾರು ಮೂರು ಕಿಮೀ ದೂರ ಓಡುತ್ತಾ ಸಾಗಿತು.ಬಳಿಕ ಮನೆಯವರು ನಾಯಿಯನ್ನೂ ಜೊತೆಯಲ್ಲಿ ಕರೆದೊಯ್ದರು. ಈ ದೃಶ್ಯ ಶ್ವಾನ ಪ್ರೀತಿಯನ್ನು ಮತ್ತೆ ಸಾಕ್ಷೀಕರಿಸುತ್ತದೆ.

ಚೆಂಬು ಪ್ರದೇಶದಲ್ಲಿ  ಹಲವಾರು ಮಂದಿಯಲ್ಲಿ ಆತಂಕ ಇದ್ದರೂ ಅನಿವಾರ್ಯ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ. ಖಾಸಗಿ ಉದ್ಯೋಗ ಇದ್ದು ನಗರದಲ್ಲಿ ಕೆಲಸ ಮಾಡುವವರು ತಾತ್ಕಾಲಿಕವಾಗಿ ವಾಸ್ತವ್ಯ ಸ್ಥಳಾಂತರಕ್ಕೆ ಚಿಂತನೆ ನಡೆಸಿದ್ದಾರೆ. ಸಾಕು ಪ್ರಾಣಿಗಳು ಇರುವ ಮಂದಿ ಅನಿವಾರ್ಯ ಪರಿಸ್ಥಿತಿಯಲ್ಲಿದ್ದಾರೆ. ಈಗಾಗಲೇ ಈ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಕಂಡುಬಂದು ಕೃಷಿ ನಾಶವಾದ ಕಾರಣ ಹೈನುಗಾರಿಕೆ ಸೇರಿದಂತೆ ವಿವಿಧ ಕೃಷಿಯಲ್ಲಿ  ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಹೈನುಗಾರಿಕೆ ಇರುವವರು ಧೈರ್ಯದಿಂದಲೇ ಬದುಕು ಸಾಗಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

19 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago