Advertisement
Exclusive - Mirror Hunt

ಚೆಂಬು-ಸಂಪಾಜೆಯಲ್ಲಿ “ಚಾರ್ಲಿ” ನೆನಪು.. ! | ಮನೆಯವರ ಜೊತೆಗೇ ಓಡುವ ನಾಯಿ…. ! |ಭೂಕಂಪನದ ಭಯದ ನಡುವೆ ಈ ಸಂಬಂಧಗಳಿಗೆ ಏನು ಹೇಳೋಣ…. ? |

Share

ಕಳೆದ ಕೆಲವು ದಿನಗಳಿಂದ ಕೊಡಗಿನ ಚೆಂಬು, ಸುಳ್ಯದ ಸಂಪಾಜೆ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ  ಭಯದ ವಾತಾವರಣ ಇದೆ. ಹೀಗಾಗಿ ಉದ್ಯೋಗದಲ್ಲಿ ಇರುವ ಕೆಲವರು ತಮ್ಮ ಮನೆಯಲ್ಲಿರುವ ಸಾಮಾಗ್ರಿಗಳ ಸಾಗಾಟ ಮಾಡುತ್ತಿದ್ದಾರೆ. ನಗರ ಪ್ರದೇಶದಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸಾಕು ಪ್ರಾಣಿಗಳ ಒಡನಾಟ ವಿವರಿಸಲು ಸಾಧ್ಯವಿಲ್ಲ. ಈ ವೇಳೆ ಚಾರ್ಲಿ ಸಿನಿಮಾ ನೆನಪಿಗೆ ಬರುತ್ತಿದೆ.

ಎಂ ಚೆಂಬು ಪ್ರದೇಶದಲ್ಲಿ ಕೃಷಿ ಭೂಮಿ ಹೊಂದಿದ್ದ ಕುಟುಂಬವೊಂದು ಕಳೆದ ಕೆಲವು ದಿನಗಳ ಭೂಕಂಪನ ಹಾಗೂ ಭಾರೀ ಮಳೆಯ ಕಾರಣದಿಂದ ಕೃಷಿ ಹಾಗೂ ಮನೆಯನ್ನು ಮಳೆಗಾಲ ಮುಗಿಯುವರೆಗೆ ಬಿಟ್ಟು ನಗರದಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿತು. ಹೀಗಾಗಿ ಮನೆಯಲ್ಲಿರುವ ವಸ್ತುಗಳ ಸಾಗಾಟವನ್ನು ಮಾಡುತ್ತಿದ್ದಾಗ ಸಂಜೆ ವೇಳೆ ಮನೆಯವರು ಅಟೋ ಮೂಲಕ ಸಾಗಿದರು. ಈ ಸಮಯದಲ್ಲಿ  ಮನೆಯ ಸಾಕು ನಾಯಿ ಅಟೋ ಜೊತೆ ಸುಮಾರು ಮೂರು ಕಿಮೀ ದೂರ ಓಡುತ್ತಾ ಸಾಗಿತು.ಬಳಿಕ ಮನೆಯವರು ನಾಯಿಯನ್ನೂ ಜೊತೆಯಲ್ಲಿ ಕರೆದೊಯ್ದರು. ಈ ದೃಶ್ಯ ಶ್ವಾನ ಪ್ರೀತಿಯನ್ನು ಮತ್ತೆ ಸಾಕ್ಷೀಕರಿಸುತ್ತದೆ.

ಚೆಂಬು ಪ್ರದೇಶದಲ್ಲಿ  ಹಲವಾರು ಮಂದಿಯಲ್ಲಿ ಆತಂಕ ಇದ್ದರೂ ಅನಿವಾರ್ಯ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ. ಖಾಸಗಿ ಉದ್ಯೋಗ ಇದ್ದು ನಗರದಲ್ಲಿ ಕೆಲಸ ಮಾಡುವವರು ತಾತ್ಕಾಲಿಕವಾಗಿ ವಾಸ್ತವ್ಯ ಸ್ಥಳಾಂತರಕ್ಕೆ ಚಿಂತನೆ ನಡೆಸಿದ್ದಾರೆ. ಸಾಕು ಪ್ರಾಣಿಗಳು ಇರುವ ಮಂದಿ ಅನಿವಾರ್ಯ ಪರಿಸ್ಥಿತಿಯಲ್ಲಿದ್ದಾರೆ. ಈಗಾಗಲೇ ಈ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಕಂಡುಬಂದು ಕೃಷಿ ನಾಶವಾದ ಕಾರಣ ಹೈನುಗಾರಿಕೆ ಸೇರಿದಂತೆ ವಿವಿಧ ಕೃಷಿಯಲ್ಲಿ  ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಹೈನುಗಾರಿಕೆ ಇರುವವರು ಧೈರ್ಯದಿಂದಲೇ ಬದುಕು ಸಾಗಿಸುತ್ತಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

14 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

15 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

23 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 days ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

2 days ago