ಕಳೆದ ಕೆಲವು ದಿನಗಳಿಂದ ಕೊಡಗಿನ ಚೆಂಬು, ಸುಳ್ಯದ ಸಂಪಾಜೆ ಸೇರಿದಂತೆ ಆಸುಪಾಸಿನ ಪ್ರದೇಶದಲ್ಲಿ ಭಯದ ವಾತಾವರಣ ಇದೆ. ಹೀಗಾಗಿ ಉದ್ಯೋಗದಲ್ಲಿ ಇರುವ ಕೆಲವರು ತಮ್ಮ ಮನೆಯಲ್ಲಿರುವ ಸಾಮಾಗ್ರಿಗಳ ಸಾಗಾಟ ಮಾಡುತ್ತಿದ್ದಾರೆ. ನಗರ ಪ್ರದೇಶದಲ್ಲಿ ವಾಸ್ತವ್ಯ ಹೂಡುತ್ತಿದ್ದಾರೆ. ಇಂತಹ ಸಮಯದಲ್ಲಿ ಸಾಕು ಪ್ರಾಣಿಗಳ ಒಡನಾಟ ವಿವರಿಸಲು ಸಾಧ್ಯವಿಲ್ಲ. ಈ ವೇಳೆ ಚಾರ್ಲಿ ಸಿನಿಮಾ ನೆನಪಿಗೆ ಬರುತ್ತಿದೆ.
ಚೆಂಬು ಪ್ರದೇಶದಲ್ಲಿ ಹಲವಾರು ಮಂದಿಯಲ್ಲಿ ಆತಂಕ ಇದ್ದರೂ ಅನಿವಾರ್ಯ ಸ್ಥಿತಿಯಲ್ಲಿ ಬದುಕು ಸಾಗಿಸುತ್ತಿದ್ದಾರೆ. ಖಾಸಗಿ ಉದ್ಯೋಗ ಇದ್ದು ನಗರದಲ್ಲಿ ಕೆಲಸ ಮಾಡುವವರು ತಾತ್ಕಾಲಿಕವಾಗಿ ವಾಸ್ತವ್ಯ ಸ್ಥಳಾಂತರಕ್ಕೆ ಚಿಂತನೆ ನಡೆಸಿದ್ದಾರೆ. ಸಾಕು ಪ್ರಾಣಿಗಳು ಇರುವ ಮಂದಿ ಅನಿವಾರ್ಯ ಪರಿಸ್ಥಿತಿಯಲ್ಲಿದ್ದಾರೆ. ಈಗಾಗಲೇ ಈ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಕಂಡುಬಂದು ಕೃಷಿ ನಾಶವಾದ ಕಾರಣ ಹೈನುಗಾರಿಕೆ ಸೇರಿದಂತೆ ವಿವಿಧ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಹೀಗಾಗಿ ಹೈನುಗಾರಿಕೆ ಇರುವವರು ಧೈರ್ಯದಿಂದಲೇ ಬದುಕು ಸಾಗಿಸುತ್ತಿದ್ದಾರೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…