ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ತಮಿಳುನಾಡು, ಕರ್ನಾಟಕ ಹಾಗೂ ಆಂಧ್ರಪ್ರದೇಶಗಳಲ್ಲಿ ಉತ್ತಮ ಮಳೆಯಾಗಲಿದೆ.…..ಮುಂದೆ ಓದಿ….
ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಮಂಗಳವಾರ ಸಂಜೆ ಚೆನ್ನೈಗೆ ಅಪ್ಪಳಿಸಿದೆ. ಪರಿಣಾಮವಾಗಿ ಚೆನ್ನೈ ಸೇರಿದಂತೆ ತಮಿಳುನಾಡು ಹೆಚ್ಚಿನ ಭಾಗದಲ್ಲಿ ಭಾರೀ ಮಳೆಯಾಗಿದೆ. ವಾಯುಭಾರ ಕುಸಿತದ ಪರಿಣಾಮವು ಪಶ್ಚಿಮದಿಂದ ವಾಯುವ್ಯಕ್ಕೆ ಚಲಿಸಿದ ಕಾರಣದಿಂದ ಕರ್ನಾಟಕ, ಆಂಧ್ರ ಕಡೆಗಳಲ್ಲೂ ಮಳೆಯಾಗಬಹುದು. ಹೀಗಾಗಿ ಉತ್ತರ ತಮಿಳುನಾಡು-ದಕ್ಷಿಣ ಆಂಧ್ರಪ್ರದೇಶದ ಕರಾವಳಿಯನ್ನು ಪುದುಚೇರಿ ಮತ್ತು ನೆಲ್ಲೂರು ದಾಟುವ ಸಾಧ್ಯತೆಯಿದೆ, ಅಕ್ಟೋಬರ್ 17 ರ ಮುಂಜಾನೆ ಚೆನ್ನೈಯಲ್ಲಿ ಭಾರೀ ಮಳೆ ನಿರೀಕ್ಷೆ ಇದೆ. ಅಕ್ಟೋಬರ್ 17 ರವರೆಗೆ ತಮಿಳುನಾಡು, ಪುದುಚೇರಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಗಾಳಿಯ ವೇಗ ಗಂಟೆಗೆ 60 ಕಿಮೀ ವರೆಗೆ ತಲುಪುವ ಸಾಧ್ಯತೆಯಿದೆ. ಚಂಡಮಾರುತ ಪರಿಣಾಮ ಎದುರಿಸಲು ಚೆನ್ನೈಯಲ್ಲಿ ಸಿದ್ಧತೆ ಮಾಡಲಾಗಿದೆ.
ವಾಯುಭಾರ ಕುಸಿತದ ಪರಿಣಾಮವಾಗಿ ಆಂಧ್ರಪ್ರದೇಶದ ಹಲವಾರು ಭಾಗಗಳು ಮತ್ತು ಕರ್ನಾಟಕದ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ನೆರೆಯ ಕೇರಳ ರಾಜ್ಯದಲ್ಲಿ ಸಹ ಮಳೆಯ ಭಾರೀ ಮುನ್ಸೂಚನೆಯಿದೆ. ತಮಿಳುನಾಡು, ಕೇರಳ, ಕರಾವಳಿ ಆಂಧ್ರಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…